About the Author

ಶೈಲಜಾ ಸುರೇಶ್ (ದಾಕ್ಷಾಯಿಣಿ ಎಚ್.), ಬಿ.ಎ. ಪದವೀಧರರು.  1964ರ ಅಕ್ಟೋಬರ್ 2 ರಂದು ಹಾಸನದಲ್ಲಿ ಜನನ. ತಂದೆ  ಹೆಚ್. ಹನುಮಂತಪ್ಪ, ತಾಯಿ- ಸಾವಿತ್ರಮ್ಮ.

ಕಾದಂಬರಿ : ಇಂದಿರಾ 2004, ಹೃದಯರಾಗ 2006, ಬಾಳಿನ ಹೊಂಬೆಳಕು 2008,  ಕಥಾಸಂಕಲನ : ಹೊಂಗನಸು 2012ರಲ್ಲಿ ಪ್ರಕಟವಾಗಿವೆ. ಸಣ್ಣಕತೆ ಹಾಗೂ ನಾಟಕಗಳನ್ನು ರಚಿಸಿದ್ದು ಹವ್ಯಾಸಿ ಪತ್ರಕರ್ತೆ ಕೂಡ. ಆಕಾಶವಾಣಿ, ದೂರದರ್ಶನಕ್ಕಾಗಿ ಹಲವು ಬರೆಹಗಳನ್ನು ನೀಡಿದ್ದಾರೆ. ಅವರು ಲೇಖಕಿಯರ ಸಾಹಿತ್ಯ ವೇದಿಕೆಯ ಅಧ್ಯಕ್ಷರು.

ಇವರಿಗೆ ಅತ್ತಿಮಬ್ಬೆ ಸಾಹಿತ್ಯ ಪ್ರಶಸ್ತಿ, ದೇವರ ದಾಸಿಮಯ್ಯ ಪ್ರಶಸ್ತಿ, ಸಾಹಿತ್ಯ ಸೇತು ಪ್ರಶಸ್ತಿ, ಗೌರವಹುದ್ದೆ : ಹಾಸನ ಜಿಲ್ಲಾ ಕನ್ನಡ ಲೇಖಕಿಯರ ಪರಿಷತ್ತು ಅಧ್ಯಕ್ಷೆ (ಸಂಸ್ಥಾಪಕ 1999-2001), ಕಿಶೋರವೃಂದ-ನಿರ್ದೇಶಕಿ, ಲೇಖಿಕಾ ಬಹುಮಾನ : ಕರ್ಮವೀರ ದೀಪಾವಳಿ ವಿಶೇಷಾಂಕ : ಪ್ರಥಮ ಬಹುಮಾನ 1997, ತುಷಾರ ಎಚ್.ಎಂ.ಟಿ. ಕಥಾಪ್ರಶಸ್ತಿ 2000, ಸಂಕ್ರಮಣ ಹನಿಗವನ ಪ್ರಶಸ್ತಿ 2000, ಕಲೇಸಂ ಪ್ರೇಮಾಭಟ್ ದತ್ತಿನಿಧಿ ಬಹುಮಾನ, ಅನುಪಮಾ ನಿರಂಜನ ಕಥಾಪ್ರಶಸ್ತಿ ಸಂದಿದೆ.

ಶೈಲಜಾ ಸುರೇಶ್

(02 Oct 1964)