About the Author

ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಸಿದ್ರಾಮ ಕಾರಣಿಕ ಅವರು 'ದಲಿತ ಬಂಡಾಯ ಸಾಹಿತ್ಯದಲ್ಲಿ ಸಾಮಾಜಿಕ ಪ್ರಜ್ಞೆ' ಎಂಬ ವಿಷಯ ಕುರಿತ ಸಂಶೋಧನೆಗೆ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕವನ, ಕತೆ, ಅನುವಾದ, ನಾಟಕ, ಲೇಖನ ಸಂಗ್ರಹ ಸೇರಿದಂತೆ ಇದುವರೆಗೆ 18 ಕೃತಿಗಳನ್ನು ಪ್ರಕಟಿಸಿದ್ದಾರೆ. ಸೂರ್ಯಕಾಂತಿ ಎಂಬ ಸಿನಿಮಾ ಸೇರಿದಂತೆ ಸಿನಿಮಾ ಮತ್ತು ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ.  ಧಾರವಾಡದ ಕರ್ನಾಟಕ ಆರ್ಟ್ಸ್ ಕಾಲೇಜಿನಲ್ಲಿ ಕಾರ್ಯನಿರ್ವಹಿಸಿದ್ದ ಅವರು ಅಕ್ಟೋಬರ್ 21, 2021 ರಂದು ನಿಧನರಾದರು. 

ಕೃತಿಗಳು: ದಲಿತ ಅಸ್ಮಿತೆ, ದೇವದಾಸಿ ಬೆತ್ತಲೆ ಸೇವೆ, ದಲಿತ ದಿಗ್ವಿಜಯ

ಸಿದ್ರಾಮ ಕಾರಣಿಕ