About the Author

ಲೇಖಕಿ ಸ್ಮಿತಾ ಅಮೃತರಾಜ್, ಸಂಪಾಜೆ, ಗೃಹಿಣಿ ಮತ್ತು ಕೃಷಿಕ ಮಹಿಳೆ. ಕನ್ನಡ ಎಂ. ಎ.ಪದವೀಧರೆ. ಲಲಿತ ಪ್ರಬಂಧ,ಕವನ ಸಂಕಲನ,ಪುಸ್ತಕ ಪರಿಚಯ ಸೇರಿದಂತೆ ಒಟ್ಟು ಏಳು ಪುಸ್ತಕಗಳು ಪ್ರಕಟಗೊಂಡಿವೆ. ‘ಕಾಲ ಕಾಯುವುದಿಲ್ಲ’, ‘ತುಟಿಯಂಚಿನಲ್ಲಿ ಉಲಿದ ಕವಿತೆಗಳು’ ‘ಮಾತು ಮೀಟಿ ಹೋಗುವ ಹೊತ್ತು’ ಅವರ ಕವನ ಸಂಕಲನಗಳು. ‘ಅಂಗಳದಂಚಿನ ಕನವರಿಕೆಗಳು’, ‘ಒಂದು ವಿಳಾಸದ ಹಿಂದೆ’, ‘ನೆಲದಾಯ ಪರಿಮಳ’ ಮೂರು ಲಲಿತ ಪ್ರಬಂಧಗಳು. ‘ಹೊತ್ತಗೆ ಹೊತ್ತ’ ಪುಸ್ತಕ ಪರಿಚಯ.

ಇವರ ಕೆಲವು ಕವಿತೆ ಮತ್ತು ಪ್ರಬಂಧಗಳಿಗೆ ಬಹುಮಾನಗಳು ಸಂದಿವೆ. ಇವರ ಕೆಲ ಕವಿತೆಗಳು ಇಂಗ್ಲಿಷ್ ಮತ್ತು ಮಲಯಾಳಂಗೆ ಅನುವಾದಗೊಂಡಿದೆ. ಒಂದು ಪ್ರಬಂಧ, ಕವಿತೆ, ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ತರಗತಿಯ ಮಕ್ಕಳಿಗೆ ಪಠ್ಯವಾಗಿದೆ. 

ಮುಂಬೈಯ ಸುಶೀಲಾ ಸೀತಾರಾಮ ಶೆಟ್ಟಿ ಪ್ರಶಸ್ತಿ, ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ, ಕೊಡಗಿನ ಗೌರಮ್ಮ ಪ್ರಶಸ್ತಿ, ಬಿ.ಎಂ.ಕಾವ್ಯ ಪ್ರಶಸ್ತಿ, ಸಾಹಿತ್ಯ ರತ್ನ ಪ್ರಶಸ್ತಿ, ಕಾಯಕ ರತ್ನ ಪ್ರಶಸ್ತಿ, ಅಡ್ವೈಸರ್ ಕಾವ್ಯ ಪ್ರಶಸ್ತಿ, ಕಾವ್ಯ ಮಾಣಿಕ್ಯ, ಗುರುಕುಲ ಶರಭ ಪ್ರಶಸ್ತಿ ಸೇರಿದಂತೆ, ಬುದ್ದ ಬಸವ ಗಾಂಧಿ ಪ್ರಶಸ್ತಿ, ಸಾಹಿತ್ಯ ಪರಿಷತ್ತಿನ ಗೌರಮ್ಮ ಹಾರ್ನಳ್ಳಿ ದತ್ತಿ ಪ್ರಶಸ್ತಿಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಸಾಹಿತ್ಯ ಕೃತಿಗಳಿಗೆ ಸಂದಿವೆ.  ಕೊಡಗಿನ ಸಂಪಾಜೆ ಬಳಿಯ ಚೆಂಬುವಿನಲ್ಲಿ ವಾಸವಾಗಿದ್ದಾರೆ.

ಸ್ಮಿತಾ ಅಮೃತರಾಜ್

(08 Jan 1978)