About the Author

ಕವಿ, ಲೇಖಕಿ, ಸ್ಮಿತಾ ಮಾಕಳ್ಳಿ ಮೂಲತಃ ತಿಪಟೂರಿನವರು. ಪಿ.ಯೂ ವರೆಗೆ ತಿಪಟೂರಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅವರು ಆನಂತರ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದರು. ನಂತರ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂಗ್ಲೀಷ್ ಸಾಹಿತ್ಯದಲ್ಲಿ ಎಂ.ಎ ಹಾಗೂ ಭಾಷಾಂತರ ಡಿಪ್ಲೊಮೋ ಪದವಿ, ಅಲ್ಲಿಯೇ ಕೆಲ ಕಾಲ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ ಸದ್ಯ ಅದೇ ವಿಶ್ವವಿದ್ಯಾನಿಲಯದಲ್ಲಿ ನೊಬೆಲ್ ಬಹುಮಾನ ಪುರಸ್ಕೃತ ಲೇಖಕ ಇಸಾಕ್ ಬಾಶೆವಿಸ್ ಸಿಂಗರ್ ಅವರ ಕಾದಂಬರಿಗಳ ಕುರಿತು ಪಿಹೆಚ್.ಡಿ ಮಾಡುತ್ತಿದ್ದಾರೆ. ಈ ವರೆಗೆ ಎರಡು ಕೃತಿಗಳು ಪ್ರಶಸ್ತಿಗಳು ಪ್ರಟಕವಾಗಿವೆ. ಮೊದಲ ಪುಸ್ತಕ ಕೈಗೆಟಕುವ ಕೊಂಬೆಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಎಲ್.ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ ಬಹುಮಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅರಳು ಪ್ರಶಸ್ತಿಗಳು ದೊರೆತಿವೆ. 

ಪ್ರಜಾವಾಣಿ ಪತ್ರಿಕೆಯ ದೀಪಾವಳಿ ಕಾವ್ಯ ಸ್ಪರ್ಧೆಯಲ್ಲಿ ಎರಡು ಬಾರಿ ಹಾಗೂ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ದ.ರಾ. ಬೇಂದ್ರೆ ಅಂತರ ಕಾಲೇಜು ಸ್ಪರ್ಧೆಯಲ್ಲಿ ಮೂರು ಬಾರಿ ಬಹುಮಾನ ಪಡೆದಿದ್ದಾರೆ.

ಸ್ಮಿತಾ ಮಾಕಳ್ಳಿ

(27 Aug 1990)

BY THE AUTHOR