About the Author

ಸಿದ್ದೇಶ್ವರ ಸ್ವಾಮಿ ಅವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಧರರು. 19ನೇ ವಯಸ್ಸಿನಲ್ಲಿಯೇ ತಮ್ಮ ಗುರು ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ದಾಂತ ಶಿಖಾಮಣಿ’ ಎಂಬ ಪುಸ್ತಕ ಬರೆದು, ಗುರುಗಳ ಹೆಸರಿನಲ್ಲೇ ಪ್ರಕಟಿಸಿದರು. ಅವರ ಸರಣಿ ಉಪನ್ಯಾಸ ‘ಬದುಕುವದು ಹೇಗೆ,  ನಾವು ಹೇಗೆ ಬದುಕಬೇಕು’ ಲಕ್ಷಾಂತರ ಭಾರತೀಯರನ್ನು ತಲುಪಿದೆ. ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ಆದ ‘ಪದ್ಮಶ್ರೀ’, ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ಹೀಗೆ ಹತ್ತು ಹಲವು ಪ್ರಶಸ್ತಿಯನ್ನು ಅವರು ಸವಿನವಾಗಿಯೆ ನಿರಾಕರಿಸಿದ್ದಾರೆ. 

ಕೃತಿಗಳು: ಅಲ್ಲಮ ಪ್ರಭುದೇವರ ವಚನ ನಿರ್ವಹನ

ಶ್ರೀ ಸಿದ್ದೇಶ್ವರ ಸ್ವಾಮಿ

(24 Oct 1941-02 Jan 2023)