About the Author

ಕಾಸರಗೋಡು ಜಿಲ್ಲೆಯ ಪೆರಡಾಲದ ಡಾ.ಸುಭಾಷ್ ಪಟ್ಟಾಜೆ ಅವರು ಕೇರಳದ ಕಣ್ಣೂರು ವಿಶ್ವವಿದ್ಯಾಲಯದ ಕಾಸರಗೋಡು ಸರಕಾರಿ ಕಾಲೇಜು ಕನ್ನಡ ಅಧ್ಯಯನ ಕೇಂದ್ರದಲ್ಲಿ ಅಧ್ಯಯನ ಮಾಡಿ ಡಾಕ್ಟರೇಟ್ ಪದವಿ ಪಡೆದವರು. ಹವ್ಯಾಸಿ ಕತೆಗಾರರಾಗಿರುವ ಇವರ ಕತೆ, ಕವನ, ಲೇಖನ ಮತ್ತು ಪುಸ್ತಕ ವಿಮರ್ಶೆಗಳು ಕನ್ನಡ ನಾಡಿನ ಪ್ರಸಿದ್ಧ ಪತ್ರಿಕೆಗಳಲ್ಲಿ ಮತ್ತು ಬಾನುಲಿ ಕೇಂದ್ರಗಳ ಮೂಲಕ ಪ್ರಸಾರವಾಗಿವೆ. ಪ್ರಸ್ತುತ ಶೇಣಿಯ ಶ್ರೀ ಶಾರದಾಂಬಾ ಹೈಯರ್‍ ಸೆಕೆಂಡರಿ ಶಾಲೆಯ ಕನ್ನಡ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೃತಿ: ಗೋಡೆ ಮೇಲಿನ ಗೆರೆಗಳು(ಕಥಾಸಂಕಲನ), ಅನುಪಮ ಅಕ್ಷರೋಪಾಸಕ ಎ.ನರಸಿಂಹ ಭಟ್ (ಜೀವನ ಚಿತ್ರಣ)

ಸುಭಾಷ್ ಪಟ್ಟಾಜೆ