About the Author

ಕನ್ನಡ ಹಾಗೂ ಇಂಗ್ಲಿಷ್ ಬರಹಗಾರ್ತಿ, ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಜನಿಸಿದ್ದು 1950 ಆಗಸ್ಟ್‌ 18ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ. ತಾಯಿ ವಿಮಲಾ, ತಂದೆ ರಾಮಚಂದ್ರ ಕುಲಕರ್ಣಿ. ವೃತ್ತಿಯಲ್ಲಿ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಇವರು ಕನ್ನಡ ಹಾಗೂ ಇಂಗ್ಲಿಷ್ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ. 

ಅತಿರಿಕ್ತೆ, ಅವ್ಯಕ್ತೆ, ಮಹಾಶ್ವೇತೆ, ಡಾಲರ್ ಸೊಸೆ, ಋಣ, ತುಮುಲ, ಯಶಸ್ವಿ (ಕಾದಂಬರಿ), ಸಾಮಾನ್ಯರಲ್ಲಿ ಅಸಮಾನ್ಯರು (ಅಂಕಣ ಬರಹಗಳು), ಗುಟ್ಟೊಂದು ಹೇಳುವೆ, ಮನದ ಮಾತು (ಅನುಭವ ಕಥನ), ಹಕ್ಕಿಯ ತೆರದಲಿ ಮುಂತಾದ ಹಲವಾರು ಕೃತಿಗಳನ್ನು ರಚಿಸಿದ್ದಾರೆ. 

ಸುಧಾ ಮೂರ್ತಿ ಅವರಿಗೆ ರೋಟರಿ ಕ್ಲಬ್‌ನಿಂದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ, ಮಿಲೆನಿಯಮ್ ಮಹಿಳಾ ಶಿರೋಮಣಿ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ, ಎಂ.ಕೆ. ಇಂದಿರಾ ಪ್ರಶಸ್ತಿ, ಸಾ.ಶಿ. ಮರುಳಯ್ಯ ಪ್ರಶಸ್ತಿ ಮುಂತಾದ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಸುಧಾ ಮೂರ್ತಿ

(18 Aug 1950)

BY THE AUTHOR

ABOUT THE AUTHOR