About the Author

ಡಾ. ಸುಜಾತ ಲಕ್ಷ್ಮೀಪುರ  ಕನ್ನಡ ಸ್ನಾತಕೋತ್ತರ ಪದವಿಯನ್ನು ಎರಡು ಚಿನ್ನದ ಪದಕ, ತೃತೀಯ ರ್ಯಾಂಕ್ ನೊಂದಿಗೆ ಪಡೆದಿದ್ದಾರೆ. ಹದಿನೈದು ವರ್ಷಗಳಿಂದ ಕನ್ನಡ ಭಾಷಾ ಬೋಧನೆಯಲ್ಲಿ ತೊಡಗಿಕೊಂಡಿರುವ ಅವರು ಅಧ್ಯಯನ ಮತ್ತು ಬರವಣಿಗೆಗಳನ್ನು ತಮ್ಮ ನೆಚ್ಚಿನ ಹವ್ಯಾಸಗಳನ್ನಾಗಿಸಿಕೊಂಡಿದ್ದಾರೆ. ಅವರ ಹಲವಾರು ಕವಿತೆಗಳು. ಲೇಖನಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಹಲವಾರು ವಿಚಾರ ಸಂಕೀರ್ಣಗಳಲ್ಲಿ, ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಉಪನ್ಯಾಸ, ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ವಿಷಯ ಮಂಡನೆ, ಕವಿಗೋಷ್ಠಿಗಳಲ್ಲಿ ಕವಿತಾ ವಾಚನ. ನಿರೂಪಣೆ, ಹೀಗೆ ಹಲವಾರು ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ಹಳೆಗನ್ನಡ ಸಾಹಿತ್ಯದ ಅಧ್ಯಯನ ಶಿಬಿರ, ಸರ್ಟಿಫಿಕೇಟ್ ಆಧಾರಿತ ಮೂರು ತಿಂಗಳ ಹಳೆಗನ್ನಡ ಅಧ್ಯಯನ ತರಗತಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿರುತ್ತಾರೆ. ಯುಜಿಸಿ ವತಿಯ ವಿದ್ಯಾರ್ಥಿವೇತನ ಪಡೆದು ಸಂಶೋಧನೆ ಕೈಗೊಂಡು, ಕನ್ನಡ ವಿಮರ್ಶಾ ಸಾಹಿತ್ಯ ಕುರಿತು ಸಂಶೋಧನಾ ಮಹಾಪ್ರಬಂಧಕ್ಕೆ ಡಾ.ಅಬ್ದುಲ್ ಕಲಾಂ ಅವರಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಬಹುಮುಖಿ ಕಥನ ಎಂಬ ಸಾಹಿತ್ಯಿಕ, ಸಾಂಸ್ಕೃತಿಕ, ವೈಚಾರಿಕ ಲೇಖನಗಳಿಂದ ಕೂಡಿದ ಪುಸ್ತಕವನ್ನು ಹೊರತಂದಿದ್ದಾರೆ. ಪ್ರಸ್ತುತ ಮಲ್ಲೇಶ್ವರಂನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಸುಜಾತ ಲಕ್ಷ್ಮೀಪುರ

(23 Sep 1975)