About the Author

ಡಾ. ಟಿ.ಎಲ್. ದೇವರಾಜ್ ಅವರು ಆಯುರ್ವೇದ ವೈದ್ಯರು. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಥೆರಣ್ಯ ಗ್ರಾಮದವರು. 1938ರ ಸೆಪ್ಟೆಂಬರ್ 22 ರಂದು ಜನನ. 1964ರಲ್ಲಿ, ಮೈಸೂರಿನಲ್ಲಿರುವ ಭಾರತೀಯ ಔಷಧ ಶಾಸ್ತ್ರಕ್ಕೆ ಸಂಬಂದಿಸಿದ ಸರ್ಕಾರಿ ಮಹಾವಿದ್ಯಾಲಯದಿಂದ ಪದವಿ ಪಡೆದರು. ಜಿಲ್ಲಾ ಸಹಾಯಕ ಆರೋಗ್ಯಾಧಿಕಾರಿಯಾಗಿ ಸೇವೆಗೆ ಸೇರಿದ 4 ವರ್ಷದ ನಂತರ, ಬನಾರಸ ವಿ.ವಿ.ದಿಂದ (1972) ಎಂ.ಡಿ. ಪದವಿ ಹಾಗೂ  ಮೈಸೂರು ವಿ.ವಿ.ಯಿಂದ ಹಿಂದಿ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬೆಂಗಳೂರಿನಲ್ಲಿಯ ಭಾರತೀಯ ಔಷಧ ಶಾಸ್ತ್ರ ಮಹಾವಿದ್ಯಾಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಅಂತಿಮವಾಗಿ ಅವರು ಆಯುಷ್ ಇಲಾಖೆಯ ಉಪನಿರ್ದೇಶಕರಾಗಿ (1996) ನಿವೃತ್ತಿ ಹೊಂದಿದರು. 

ಸುಮಾರು 45ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, ಈ ಪೈಕಿ 2 ಕೃತಿಗಳು ರಷ್ಯಾ ಭಾಷೆಗೆ ಹಾಗೂ 1 ಕೃತಿಯು ಸ್ಪ್ಯಾನಿಷ್ ಭಾಷೆಗೆ ಅನುವಾದಗೊಂಡಿದೆ. 

ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದಿದ್ದಾರೆ. ಇವರ ವೈದ್ಯ ಸೇವೆಗೆ ರಾಷ್ಟ್ರಪತಿಗಳು ಸೇರಿದಂತೆ ರಾಜ್ಯ ಸರ್ಕಾರವು  ಗೌರವಿಸಿದೆ. ಅಂತಾರಾಷ್ಟ್ರೀಯ ಸೇವೆಗಾಗಿಯೂ ಹಲವು ಪ್ರಶಸ್ತಿಗಳು ಪಡೆದಿದ್ದಾರೆ. ಬೆಂಗಳೂರಿನ ಶ್ರೀ ವೈದ್ಯನಾಥ ಆಯುರ್ವೇದ ಭವನದಲ್ಲಿ ಇವರು ಕಳೆದ 22 ವರ್ಷಗಳಿಂದ ಉಚಿತವಾಗಿ ಸಲಹೆಗಳನ್ನು ನೀಡುವ ಮೂಲಕ ರೋಗಿಗಳ ಸೇವೆ ಮಾಡುತ್ತಿದ್ದಾರೆ.

ಟಿ.ಎಲ್. ದೇವರಾಜ್

(22 Sep 1938)