About the Author

ಟಿ. ಯಲ್ಲಪ್ಪ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎ.ನಾರಾಯಣಪುರದಲ್ಲಿ  02-10-1970 ರಂದು ಜನಿಸಿದರು. ಕೃಷಿ ಕಾರ್ಮಿಕರ ಮನೆಯಲ್ಲಿ ಹುಟ್ಟಿದ ಯಲ್ಲಪ್ಪನವರು ಶಾಲಾ ದಿನಗಳಿಂದಲೇ ಕವಿತಾ ರಚನೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಶಾಲಾ ಕಾಲೇಜುಗಳ ಅನೇಕ ಕಾವ್ಯ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ಪ್ರತಿಭಾವಂತರು. ಪ್ರಸ್ತುತ ಬೆಂಗಳೂರಿನ ಕೆ.ಆರ್.ಪುರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಇಪ್ಪತ್ತೆರಡರ ಅಳಲು(ಲಲಿತಾ ಪ್ರಬಂಧ), ಕಡಲಿಗೆ ಕಲಿಸಿದ ದೀಪ ಚಿಟ್ಟೆಮತ್ತು ಜೀವಯಾನ, ನವಿಲಿಗೆ ಬಿದ್ದ ಕತ್ತಲ ಕನಸು, ಇವರ ಕಡಲಿಗೆ ಕಳಿಸಿದ ದೀಪ ಕೃತಿಯು ANKLETS ಎಂಬ ಶೀರ್ಷಿಕೆಯಲ್ಲಿ ಇಂಗ್ಲಿಷಿಗೆ ಭಾಷಾಂತರಗೊಂಡಿದೆ, ಕಣ್ಣ ಪಾಪೆಯ ಬೆಳಕು ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ. ಶ್ರೀಯುತರ ಸಾಹಿತ್ಯ ಸೇವೆಗಾಗಿ ರಾಜ್ಯ ಸಾಹಿತ್ಯ ಅಕಾಡೆಮಿ ಪುರಸ್ಕಾರ, ಜಿ.ಎಸ್.ಶಿವರುದ್ರಪ್ಪ ಕಾವ್ಯ ಪ್ರಶಸ್ತಿ, ಚೆನ್ನವೀರ ಕಣವಿ ಕಾವ್ಯ ಪ್ರಶಸ್ತಿ, ವೀಚಿ ಕಾವ್ಯ ಪುರಸ್ಕಾರ ಸೇರಿದಂತೆ ಹಲವಾರು ಗೌರವ ಪ್ರಶಸ್ತಿಗಳು ಲಭಿಸಿವೆ. 

ಟಿ. ಯಲ್ಲಪ್ಪ

(02 Oct 1970)