About the Author

ತಾರಿಣಿ ಶುಭದಾಯಿನಿ ಆರ್. ಅವರು 1971 ಜನವರಿ 09ರಂದು ಮೈಸೂರಿನಲ್ಲಿ ಹುಟ್ಟಿದರು.  ಕನ್ನಡ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಅಧ್ಯಯನ ಮಾಡಿದವರು. ’ತೋಡಿರಾಗ, ಚಿತ್ತಗ್ಲಾನಿಯ ಮಾತು, ಒಂದು ತುಂಡು ಬೆಲ್ಲ’ ಎಂಬ ಕವನ ಸಂಕಲನ ಹೊರತಂದಿದ್ಧಾರೆ.  ಉಪನ್ಯಾಸಕಿಯಾಗಿದ್ದು, ಕನ್ನಡ ಸಾಹಿತ್ಯದ ಬಗ್ಗೆ ಹಲವಾರು ಉಪನ್ಯಾಸ ನೀಡಿದ್ದಾರೆ. ‘ಹೆಡೆಯಂತಾಡುವ ಸೊಡರು’ ಅವರ ವಿಮರ್ಶಾ ಕೃತಿ.

ಸ್ತ್ರೀಶಿಕ್ಷಣ ಚರಿತ್ರೆಯ ಹೆಜ್ಜೆಗಳು ಅವರ ಮಾನವಿಕ ಕೃತಿಯಾಗಿದೆ. ಕರ್ನಾಟಕ ಲೇಖಕಿಯರ ಸಂಘದಿಂದ ಗುಡಿಬಂಡೆ ಪೂರ್ಣಿಮಾ ದತ್ತಿಪ್ರಶಸ್ತಿ, ಕಥಾರಂಗಂ ಪ್ರಶಸ್ತಿ, ಪ್ರೊ. ಡಿ.ಸಿ. ಅನಂತಸ್ವಾಮಿ ಸಂಸ್ಕರಣ ದತ್ತಿನಿಧಿ ಪ್ರಶಸ್ತಿ ಬೇಂದ್ರೆ ಗ್ರಂಥ ಬಹುಮಾನ ಮುಂತಾದ ಪ್ರಶಸ್ತಿಗಳು ಲಭಿಸಿವೆ. ಸ್ತ್ರೀವಾದಕ್ಕೆ ಹೊಸ ಆಯಾಮದ ಅರ್ಥ ನೀಡಿದವರಲ್ಲಿ ಒಬ್ಬರು.

ತಾರಿಣಿ ಶುಭದಾಯಿನಿ .ಆರ್

(09 Jan 1971)

BY THE AUTHOR