About the Author

ಕತೆಗಾರ ತಿರುಪತಿ ಭಂಗಿ ಅವರು ಬಾಗಲಕೋಟೆ ಸಮೀಪದ ದೇವನಾಳ ಎಂಬ ಹಳ್ಳಿಯಲ್ಲಿ 1984 ರಲ್ಲಿ ಜನಿಸಿದರು. ತಂದೆ ಮಲ್ಲಪ್ಪ ತಾಯಿ ಗೌರವ್ವ. ಬಾಲ್ಯದಲ್ಲಿಯೇ ಹೆತ್ತವರನ್ನು ಕಳೆದುಕೊಂಡರು. ಹೈಸ್ಕೂಲ್ ಶಿಕ್ಷಣ ಮಾಡುತ್ತಿರುವಾಗಲೇ ಅಜ್ಜ-ಅಜ್ಜಿಯರೂ ತೀರಿಕೊಂಡರು. ಸಾಹಿತ್ಯ ರಚನೆಗೆ ಇವರ ಬಡತನ, ಹಸಿವು, ಅವಮಾನಗಳೇ ಮೂಲ ದ್ರವ್ಯ. .

ಬಾಗಲಕೋಟೆಯ ಬಸವೇಶ್ವರ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ‘ಹೃದಯರಾಗ, ಅವ್ವ, ಕವಳೆಗಣ್ಣಿನ ಹುಡುಗಿ, ಮನಸು ಕೊಟ್ಟವಳು, ಅಪ್ಪ’ ಕವನ ಸಂಕಲನಗಳು ಪ್ರಕಟವಾಗಿವೆ. ಅವರ ಮೊದಲ ಕಾದಂಬರಿ ‘ಫೋಬಿಯಾ' 2017ರಲ್ಲಿ ಪ್ರಕಟಣೆ ಕಂಡಿತು. ಅವರ ‘ಜಾತಿ ಕುಲುಮ್ರಾಗ ಅರಳಿದ ಪ್ರೀತಿ’ ಚೊಚ್ಚಲ ಕೃತಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರೋತ್ಸಾಹ ಧನ ಸಹಾಯ ಪಡೆದಿದೆ. ಈ ಕೃತಿಗೆ ಕೆ. ವಾಸುದೇವಾಚಾರ್ಯ ಪ್ರಶಸ್ತಿ, ಬೀಳಗಿ ದತ್ತಿ ಪ್ರಶಸ್ತಿ, ಸಮೀರವಾಡಿ ದತ್ತಿ ಪ್ರಶಸ್ತಿಗಳು ಸಂದಿವೆ. “ಕೈರೊಟ್ಟಿ” ಕಥಾ ಸಂಕಲನದ “ಕೈರೊಟ್ಟಿ” ಕಥೆ ಸಿನಿಮಾ ಆಗಿ ಬೆಳ್ಳಿತೆರೆಯ ಮೇಲೂ ಮೂಡಿದೆ. ‘ಗಾಂಧಿ ಬಜಾರ’, ‘ಕೆಂಪರೋಡ್’ ಅವರ ಕಥಾ ಸಂಕಲನ. 

ತಿರುಪತಿ ಭಂಗಿ