About the Author

ಡಾ. ಉದಯ ಕುಮಾರ್‌ ಇರ್ವತ್ತೂರು ಅವರು ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದವರು. ತಂದೆ ನೇಮಿರಾಜ್‌ ಹಾಗೂ ತಾಯಿ ಮಾಲತಿ. ಮಂಗಳೂರಿನ ಹಂಪನಕಟ್ಟೆಯ ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ಸದ್ಯ ನಿವೃತ್ತರಾಗಿದ್ದಾರೆ. ಬರವಣಿಗೆ ಇವರ ನೆಚ್ಚಿನ ಹವ್ಯಾಸ. ಈವರೆಗೆ ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ಅವುಗಳು; ವಾಣಿಜ್ಯ ಶಾಸ್ತ್ರ,- ಕನ್ನಡ ವಿಶ್ವವಿದ್ಯಾಲಯ ಹಂಪಿ, ಅಭಿವೃದ್ಧಿ: ವಾಸ್ತವ ಮತ್ತು ವಿಕಲ್ಪ, ಉಡುಪಿ ಜಿಲ್ಲೆ, ಸರ್ವೋದಯ ಮತ್ತು ಅಭಿವೃದ್ದಿ, ಗೆಲುವಿನ ದುಃಖ ಮತ್ತು ಸೋಲಿನ ಸುಃಖ ಇತ್ಯಾದಿ.

ಉದಯ ಕುಮಾರ ಇರ್ವತ್ತೂರು

(01 Jun 1960)