About the Author

ಉಪೇಂದ್ರ ಅವರು ಚಲನಚಿತ್ರ ನಿರ್ದೇಶಕ ಹಾಗೂ ನಟ. ಕುಂದಾಪುರ ಸಮೀಪದ  ಕೋಟೇಶ್ವರದಲ್ಲಿ ಜನಿಸಿದರು. 1992ರಲ್ಲಿ ಬಿಡುಗಡೆಯಾದ ತರ್ಲೆ ನನ್ಮಗ ಚಿತ್ರದ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸಿದ್ದು, ಅದಕ್ಕೂ ಮುಂಚೆ ನಟ ನಿರ್ದೇಶಕ ಕಾಶೀನಾಥ್ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಬಸವನಗುಡಿಯ ಎ.ಪಿ.ಎಸ್ ಕಾಲೇಜಿನ ವಾಣಿಜ್ಯ ವಿಷಯ ಓದುತ್ತಿರುವಾಗಲೇ ಚಲನಚಿತ್ರ ನಿರ್ದೇಶನದ ಗೀಳನ್ನು ಅಂಟಿಸಿಕೊಂಡು, ನಿರ್ದೇಶಕ 'ಕಾಶಿನಾಥ' ಅವರ ಬಳಿ ಸಹಾಯ ನಿರ್ದೇಶಕರಾಗಿ ಕೆಲಸ ಮಾಡಿದರು.

ಆನಂತರ, ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಬೆಳೆದ ಉಪೇಂದ್ರ,  ತೆಲುಗು ಚಿತ್ರಗಳಲ್ಲೂ ನಟಿಸಿದ್ದಾರೆ. ತಮ್ಮ ಅನುಭವಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ. ‘ಇದನ್ನ ಓದ್ಬೇಡಿ’ ಅವರ ಮೊದಲ ಕೃತಿ.

ಉಪೇಂದ್ರ

(18 Sep 1968)