About the Author

ಒರಿಗಾಮಿ ಗಣಿತದ ಬಗ್ಗೆ ಅಧಿಕೃತವಾಗಿ ಮಾತನಾಡಬಲ್ಲ ಕೆಲವೇ ಕೆಲವರಲ್ಲಿ ವಿ.ಎಸ್.ಎಸ್. ಶಾಸ್ತ್ರಿ ಒಬ್ಬರು. ನವಕರ್ನಾಟಕದ ಗಣಿತ ಸಂವತ್ಸರ ಮಾಲೆಯ ಸಂಪಾದಕರ ಪೈಕಿ ಇವರೂ ಒಬ್ಬರು. 

ಗಣಿತ ಮತ್ತು ವಿಜ್ಞಾನ ಕುರಿತು ಹಲವು ಕೃತಿಗಳನ್ನು ರಚಿಸಿದ್ದಾರೆ. ಅರವಿಂದ ಗುಪ್ತ ಅವರ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಗಣಿತ ಚಟುವಟಿಕೆಗಳು, ಆಹಾ ಎಷ್ಟೊಂದು ಚಟುವಟಿಕೆಗಳು, ಸೌರಶಕ್ತಿಯ ಕತೆ, ತ್ಯಾಜ್ಯವಸ್ತುಗಳಿಂದ ವಿಜ್ಞಾನ-ಆಟಿಕೆಗಳು ಮುಂತಾದವು ಪ್ರಮುಖ ಕೃತಿಗಳು. ಇವರಿಗೆ ವಿಜ್ಞಾನ ಸಂವಹನಕಾರ ಪ್ರಶಸ್ತಿಯು ಲಭಿಸಿದೆ. 

ವಿ.ಎಸ್.ಎಸ್. ಶಾಸ್ತ್ರಿ