About the Author

ವೀರಣ್ಣ ಮಡಿವಾಳ ಅವರು ಸೆಪ್ಟೆಂಬರ್ 01, 1983ರಂದು ಜನಿಸಿದರು. ಕಲಿವಾಳ, ಕಲಕೇರಿ, ಸಿರಿಗೆರೆ, ಮುಂಡರಗಿ, ಕೊಪ್ಪಳ ಮತ್ತು ಗುಲ್ಬರ್ಗದಲ್ಲಿ ವಿದ್ಯಾಭ್ಯಾಸ. 2007 ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸವಣೂರು ತಾಲ್ಲೂಕಿನ ಮೆಳ್ಳಾಗಟ್ಟಿ ಪ್ಲಾಟ್ ನಲ್ಲಿ ಸೇವೆ ಆರಂಭ. ಸದ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗಾವಡ್ಯಾನವಾಡಿಯಲ್ಲಿ ವೃತ್ತಿ. ಗುಲ್ಬರ್ಗಾದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಇಂಗ್ಲೀಷ್ ಸಾಹಿತ್ಯದಲ್ಲಿ ಪ್ರಥಮ ರ್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2010ರಲ್ಲಿ 'ನೆಲದ ಕರುಣೆಯ ದನಿ' ಕವನ ಸಂಕಲನ ಮತ್ತು ಆಡಿಯೋ ಬುಕ್ ಪ್ರಕಟವಾಗಿದೆ. ಚಿತ್ರ ಮತ್ತು ಫೊಟೋಗ್ರಫಿಯಲ್ಲೂ ಕವಿತೆಯನ್ನೇ ಹುಡುಕುತ್ತಿರುವ ವೀರಣ್ಣ 2013 ರಲ್ಲಿ ಗುಲ್ಬರ್ಗದಲ್ಲಿ ಸಾಂಗ್ಸ್ ಆಫ್ ಸೈಲೆನ್ಸ್ ಎಂಬ ಛಾಯಾಚಿತ್ರ ಪ್ರದರ್ಶನ ನಡೆಸಿದ್ದಾರೆ. 

ಕನ್ನಡದ ಚೊಚ್ಚಲ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ , ಬೇಂದ್ರೆ ಗ್ರಂಥ ಬಹುಮಾನ, ಇಂಚಲ ಕಾವ್ಯ ಪ್ರಶಸ್ತಿ, ಅಮ್ಮ ಪ್ರಶಸ್ತಿ, ಅರಳು ಪ್ರಶಸ್ತಿ, ಸಾಂಬಶಿವಪ್ಪ ಸ್ಮಾರಕ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಮತ್ತು ಕಾವ್ಯಸ್ಪರ್ಧೆಗಳಿಂದ ಪುರಸ್ಕೃತರಾಗಿರುವ ವೀರಣ್ಣರ ಕವಿತೆ ಇತರ ಭಾಷೆಗಳಿಗೆ ಅನುವಾದಗೊಂಡಿವೆ ಮತ್ತು ಪಠ್ಯದಲ್ಲಿ ಸೇರಿವೆ. 

ವೀರಣ್ಣ ಮಡಿವಾಳರ

(01 Sep 1983)

Awards