About the Author

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವೀರೇಶ ಬಡಿಗೇರ, ಕನ್ನಡದ ಹಸ್ತಪ್ರತಿ ತಜ್ಞರಲ್ಲಿ ಒಬ್ಬರು. 1966 ಏಪ್ರಿಲ್‌ 4 ರಂದು ಜನಿಸಿದರು. ಎಂ. ಎ., ಪಿಎಚ್.ಡಿ. ಹಾಗೂ ಬಿ.ಇಡ್, ಡಿಪ್ಲೊಮಾ ಇನ್ ಎಪಿಗ್ರಾಫಿ ಮಾಡಿದ್ದು, ಕನ್ನಡ ಸಾಹಿತ್ಯ, ಸಂಸ್ಕೃತಿ, ಜಾನಪದ, ಸಂಗೀತ, ತಂತ್ರಜ್ಞಾನ ಆಸಕ್ತಿ ಕ್ಷೇತ್ರಗಳು. 28 ವರ್ಷ ಕಾಲ ಬೋಧನೆ ಹಾಗೂ ಸಂಶೋಧನೆಯ ಅನುಭವ ಇದೆ. ಬಾಗಲಕೋಟೆಯ  ಪಿ. ಎಂ. ನಾಡಗೌಡಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ  ಅರೆಕಾಲಿಕ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದರು. 1992 ರಿಂದ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಶೋಧನ ಸಹಾಯಕರಾಗಿ ಕೆಲಸಕ್ಕೆ ಸೇರಿದರು. 1996 ಆಗಸ್ಟನಿಂದ ಹಸ್ತಪ್ರತಿಶಾಸ್ತ್ರ ವಿಭಾಗದಲ್ಲಿಉಪನ್ಯಾಸಕರಾದರು. 1996ರಲ್ಲಿ ಉತ್ತರ ಕರ್ನಾಟಕದ ಜಾನಪದ ಗೀತಮೇಳ: ಒಂದು ಸಾಂಸ್ಕೃತಿಕ ಅಧ್ಯಯನ ಎಂಬ ವಿಷಯದ ಮೇಲೆ ಮಹಾಪ್ರಬಂಧ ಸಲ್ಲಿಸಿ ಡಾಕ್ಟರೇಟ್ ಪದವಿ ಪಡೆದರು. ಬಸವರಾಜ ಕಟ್ಟಿಮನಿ,, ರಾಶಿಬುತ್ತಿ, ಅಡಿಗಲ್ಲು, ಹುಳ್ಳವ್ವ ಸಂಸ್ಕೃತಿ ಸಂಕಥನ, ನನ್ನೊಡಲ ಏಕತಾರಿ, ಹಲಗೆ ಬಳಪ ಪ್ರಕಟಿತ ಕೃತಿಗಳು.

ವೀರೇಶ ಬಡಿಗೇರ

(04 Apr 1966)

Books by Author