About the Author

ಕಲಬುರ್ಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕರಾಗಿರುವ ವಿಕ್ರಮ ವಿಸಾಜಿ ಅವರು ಕವಿ-ವಿಮರ್ಶಕ. ಬೀದರ ಜಿಲ್ಲೆಯ ಭಾಲ್ಕಿಯವರಾದ ವಿಕ್ರಮ ಅವರ ತಂದೆ ಹೆಸರಾಂತ ಕವಿ-ಲೇಖಕರು. ಬಾಲ್ಯದಲ್ಲಿಯೇ ಕವಿತೆ ಬರೆಯುವುದನ್ನು ಆರಂಭಿಸಿದ ವಿಕ್ರಮ ಅವರು ಹೈಸ್ಕೂಲಿನಲ್ಲಿದ್ದಾಗಲೇ ಕವನ ಸಂಕಲನ ಪ್ರಕಟಿಸಿದ್ದರು. 

ಕಲಬುರ್ಗಿಯ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಎಂ.ಎ) ಪದವಿ ಪಡೆದ ಅವರು ಕಂಬಾರರ ಕಾವ್ಯದ ಮೇಲೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್‌.ಡಿ. ಪದವಿ ಪಡೆದಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ ಸೊಂಡೂರು, ರಾಯಚೂರು ಸ್ನಾತಕೋತ್ತರ ಕೇಂದ್ರಗಳಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದರು. 

ಕನ್ನಡ ಸಾಹಿತ್ಯ ಪರಿಷತ್ತು ಯುವ ಲೇಖಕರಿಗೆ ಶ್ರೀವಿಜಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮಾಷಾ ಕವನ ಸಂಕಲನ, ರಸಗಂಗಾಧರ ಅವರ ನಾಟಕ.

ಕೃತಿಗಳು; ತಮಾಷಾ, ಗೂಡು ಕಟ್ಟುವ ಚಿತ್ರ, ವಿಕ್ರಮ ವಿಸಾಜಿ ಕಥೆಗಳು, ಬಿಸಿಲ ಕಾಡಿನ ಹಣ್ಣು (ಕವನ ಸಂಗ್ರಹಗಳು) ಬೆಳಗಿನ ಮುಖ, ನಾದಗಳು ನುಡಿಯಾಗಲೇ, ಪಠ್ಯದ ಭವಾವಳಿ (ವಿಮರ್ಶೆ) ರಸಗಂಗಾಧರ, ರಕ್ತ ವಿಮಾಪ (ನಾಟಕ) ಕಂಬಾರರ ನಾಟಕಗಳು, ಮತ್ತೆ ಬಂತು ಶ್ರಾವಣ (ಸಂಪಾದನೆ) ಗ್ರೀಕ್‌ ಹೊಸ ಕಾವ್ಯ, ಇಂದ್ರಸಭಾ, ಸಿಮೊನ್‌ ದ ಬೋವಾ (ಅನುವಾದ).

ವಿಕ್ರಮ ವಿಸಾಜಿ