About the Author

ವಿನಯಾ- ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ, ಕುಮಟಾ ತಾಲೂಕಿನ ನಾಡುಮಾಸ್ಕೇರಿಯಲ್ಲಿ. ಕರ್ನಾಟಕ ವಿಶ್ವವಿದ್ಯಾಲಯದಿಂದ 1990ರಲ್ಲಿ ಕನ್ನಡ ಎಂ.ಎ, 1992ರಲ್ಲಿ ಎಂ.ಫಿಲ್. ಹಾಗೂ 1996ರಲ್ಲಿ ಪಿಎಚ್.ಡಿ ಪದವಿ ಪಡೆದಿದ್ದು, ಸವಣೂರು, ನರಗುಂದದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಸಧ್ಯ ಧಾರವಾಡ ಜಿಲ್ಲೆಯ ಅಳ್ಳಾವರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಇವರು ಹಲವು ಕೃತಿಗಳನ್ನು ರಚಿಸಿದ್ದಾರೆ. ವಿನಯಾ ಅವರ ಕವನ ಸಂಕಲನಗಳು: ಬಾಯಾರಿಕೆ, ನೂರು ಗೋರಿಯ ದೀಪ, ಹಸಬಿ, ಇನ್ನೂ ಕಥಾ ಸಂಕಲನಗಳು: ಊರ ಒಳಗಣ ಬಯಲು, ಉರಿ.

ಸಾಹಿತ್ಯ ಕ್ಷೇತ್ರದ ಇವರ ಸಾಧನೆಗಾಗಿ ಪು.ತಿ.ನ. ಕಾವ್ಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕೆಡಮಿ ಪುಸ್ತಕ ಬಹುಮಾನ, ಸಾರಂಗಮಠ ದತ್ತಿ ಬಹುಮಾನ, ರತ್ನಮ್ಮ ಹೆಗ್ಗಡೆ ದತ್ತಿ ಪ್ರಶಸ್ತಿ, ಎಚ್. ವಿ. ಸಾವಿತ್ರಮ್ಮ ದತ್ತಿ ಬಹುಮಾನ, ಅಂಡಾಳ್ ಸನ್ಮಾನ್, ಛಂದ ಪುಸ್ತಕ ಬಹುಮಾನ, ಲಂಕೇಶ್ ಕಥಾ ಬಹುಮಾನ, ಪ್ರಜಾವಾಣಿ ದೀಪಾವಳಿ ಕಥಾ ಸ್ಪರ್ಧೆ ಬಹುಮಾನಗಳು, ಕ್ರೈಸ್ತ ಕಾಲೇಜು ಕನ್ನಡ ಸಂಘದ ಬೇಂದ್ರೆ ಸತಿ ಕಾವ್ಯ ಬಹುಮಾನ, ಸಕಾಲಿಕ ಕಾವ್ಯ, ಸಂಕ್ರಮಣ ಕಾವ್ಯ ಬಹುಮಾನ ಮುಂತಾದವು ಲಭಿಸಿವೆ.

ವಿನಯಾ ಒಕ್ಕುಂದ

(24 Oct 1968)

Awards