About the Author

ಕವಯತ್ರಿ ವಿಶಾಲಾ ಆರಾಧ್ಯ ಅವರು ಬೆಂಗಳೂರು ಜಿ. ಆನೇಕಲ್ ತಾಲ್ಲೂಕಿನ ರಾಜಾಪುರದವರು. ಎಂ.ಎ. ಕನ್ನಡ ಸ್ನಾತಕೋತ್ತರ ಪದವೀಧರರು. ಶಿಕ್ಷಕ ತರಬೇತಿ ಪೂರ್ಣಗೊಳಿಸಿದ್ದು, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಅಭ್ಯಾಸಿಗಳು. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ತಮ್ಮ ಉತ್ತಮ ಸೇವೆಯಿಂದಾಗಿ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ, ಶಿಕ್ಷಕ ರತ್ನ ಪ್ರಶಸ್ತಿ, ಕನ್ನಡ ನಿಧಿ ಪ್ರಶಸ್ತಿ, ಸುವರ್ಣ ಸಂಭ್ರಮ ಶಿಕ್ಷಕ ಪ್ರಶಸ್ತಿ, ಆದರ್ಶ ಅಧ್ಯಾಪಕಿ ಪ್ರಶಸ್ತಿ, ಆದರ್ಶ ಮಹಿಳಾ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ಸಂದಿವೆ. ಕವನ ಕತೆಗಳನ್ನು ಬರೆವ ಅವರು ವಿಶೇಷವಾಗಿ ಮಕ್ಕಳ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದಾರೆ. ಮಕ್ಕಳಿಗಾಗಿ ಎರಡು ಕವನ ಸಂಕಲನಗಳನ್ನು ಪ್ರಕಟಿಸಿರುವ ಅವರು ‘ಗೊಂಬೆಗೊಂದು ಚೀಲ' ಎಂಬ ಮಕ್ಕಳ ಕತಾ ಸಂಕಲನವನ್ನೂ ಪ್ರಕಟಿಸಿದ್ದು, ಈ ಕೃತಿಗೆ ಹೊನ್ಕಲ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ 2019-2020ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿದೆ.

ವಿಶಾಲಾ ಆರಾಧ್ಯ