ಎ.ಆರ್. ಕೃಷ್ಣಶಾಸ್ತ್ರಿ

Author : ಟಿ.ಎಸ್. ಗೋಪಾಲ್

Pages 48

₹ 27.00




Year of Publication: 2020
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001
Phone: 08026617100

Synopsys

ಕನ್ನಡ ಕುಲಸಾರಥಿ ಖ್ಯಾತಿಯ ಎ.ಆರ್. ಕೃಷ್ಣಶಾಸ್ತ್ರಿ ಅವರು ಬದುಕು-ಬರಹ ಕುರಿತು ಲೇಖಕ ಟಿ.ಎಸ್. ಗೋಪಾಲ ಅವರು ಬರೆದ ಕೃತಿ ಇದು. ಎ.ಆರ್. ಕೃಷ್ಣಶಾಸ್ತ್ರಿ ಅವರು ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೃತಿಗಳ ಕೊಡುಗೆ ನೀಡಿದ್ದು, ವಚನ ಭಾರತ ಕೃತಿಯ ಮೂಲಕ ಮಹಾಭಾರತದ ಕಥೆಯನ್ನು ತೀರಾ ಸರಳವಾಗಿ ನೀಡಿದ ಖ್ಯಾತಿ ಇವರದ್ದು. ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕೆ ಹಾಘೂ ನಿಘಂಟು ಸಂಪಾದಕರಾಗಿದ್ದರು. ಹರಿಶ್ಚಂದ್ರಕಾವ್ಯ ಸಂಗ್ರಹ, ವಚನ ಭಾರತ, ನಾಗಮಹಾಶಯ (ಅನುವಾದ), ನಿಬಂಧಮಾಲಾ (ಅನುವಾದ), ಭಾಷಣಗಳು ಮತ್ತು ಲೇಖನಗಳು (ಬಿಡಿವಿಚಾರಗಳು), ಬಂಕಿಮಚಂದ್ರ, ಶ್ರೀ ರಾಮಕೃಷ್ಣ ಪರಮಹಂಸರ ಜೀವನಚರಿತ್ರೆ, ಕನ್ನಡ ಕೈಪಿಡಿ (ಭಾಗ-೧), ನಯಸೇನನ ಧರ್ಮಾಮೃತ ಇತ್ಯಾದಿ ಕೃತಿಗಳನ್ನು ನೀಡಿದ ಅವರ ಬದುಕನ್ನು ಚಿತ್ರಿಸಿದ ಕೃತಿ ಇದು.ಸಾಹಿತಿ ಡಾ. ನಾ. ಸೋಮೇಶ್ವರ ಅವರು ಕೃತಿಯನ್ನು ಸಂಪಾದಿಸಿದ್ದಾರೆ. 

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books