ಆಚಾರ್ಯ ಪ್ರಹಸನ ಮತ್ತು ಎನ್. ಹುಚ್ಚೂರೀ

Author : ಪ್ರಸನ್ನ

Pages 156

₹ 108.00




Year of Publication: 2012
Published by: ಮನೋಹರ ಗ್ರಂಥ ಮಾಲಾ
Address: ಲಕ್ಷ್ಮೀ ಭವನ, ಸುಭಾಷ್ ರೋಡ್, ಧಾರವಾಡ-580001
Phone: 08362441823

Synopsys

ಖ್ಯಾತ ರಂಗಕರ್ಮಿ ಪ್ರಸನ್ನ ಅವರ ಕೃತಿ-ಆಚಾರ್ಯ ಪ್ರಹಸನ ಮತ್ತು ಎನ್. ಹುಚ್ಚೂರೀ. ಈ ಕೃತಿಯಲ್ಲಿ ಎರಡು ಪ್ರಹಸನಗಳಿವೆ. ‘ಆಚಾರ್ಯ ಪ್ರಹಸನ’ ದಲ್ಲಿ ಧರ್ಮದ ಹೆಸರಿನಲ್ಲಿ ನಡೆಯುವ ಬೂಟಾಟಿಕೆ ಇದೆ. ಸೂರದಾಸ, ರವಿದಾಸನಂತಹ ಸಂತರು ಇಂದು ಇಲ್ಲವೆಂದಲ್ಲ; ಅಂತಹ ಸಂತರು ಇಂದು ಇದ್ದು ಅವರನ್ನು ಗುರುತಿಸುವ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡಿದ್ದೇವೆ. ಬರೀ ಬೂಟಾಟಿಕೆಯ-ಢೋಂಗಿ ವೇಷಧಾರಿಗಳ ಅಬ್ಬರ ಹೆಚ್ಚುತ್ತಿದೆ. ಒಟ್ಟಿನಲ್ಲಿ ಧಾರ್ಮಿಕ ಆಷಾಡಭೂತಿತನವನ್ನು ವಿಡಂಬಿಸುತ್ತದೆ. ಎರಡನೇ ಪ್ರಹಸನ-ಎನ್. ಹುಚ್ಚೂರೀ. ಇವು ಎರಡು ನಾಟಕಗಳಿಗೆ ಪ್ರೇರಣೆ ಫ್ರೆಂಚ್ ಪ್ರಹಸನಕಾರ ಮೊಲಿಯರನದ್ದು. ‘ಆಚಾರ್ಯ ಪ್ರಹಸನ’ವು ಮೋಲಿಯರನ ‘ಲೆ ತಾರ್ ತೂಫ್’ ನಾಟಕದಿಂದಲೂ. ‘ಏನ್ ಹುಚ್ಚೂರೀ….’ ನಾಟಕವು ‘ಬೂರ್ಜ್ವಾ ದಿ ಜಂಟಲ್ ಮನ್’ ನಾಟಕದಿಂದಲೂ ಪ್ರಭಾವಿತವಾಗಿವೆ.

About the Author

ಪ್ರಸನ್ನ
(23 March 1951)

ಖ್ಯಾತ ರಂಗಕರ್ಮಿ ಪ್ರಸನ್ನ ‌ಅವರು ಜನಿಸಿದ್ದು ಮಾರ್ಚ್ 23, 1951 ರಂದು ಶಿವಮೊಗ್ಗ ಜಿಲ್ಲೆಯ ಆನವಟ್ಟಿಯಲ್ಲಿ. ತಂದೆ ಪ್ರಹ್ಲಾದಾಚಾರ್ಯ, ತಾಯಿ ಹೇಮಾವತಿ ಬಾಯಿ. ಸೆಂಟ್ರಲ್ ಕಾಲೇಜಿನಿಂದ ಎಂ.ಎಸ್ಸಿ. ಪದವಿ ಪಡೆದವರು.  ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮ ಶಾಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರವಾದರು.  ಪ್ರಸನ್ನರು ದೆಹಲಿಯ ನಾಟಕ ಶಾಲೆಯಲ್ಲಿದ್ದ ದಿನಗಳಲ್ಲಿ ನಿರ್ದೇಶಿಸಿದ ನಾಟಕಗಳಲ್ಲಿ ಗಾಂಧಿ, ಉತ್ತರ ರಾಮಚರಿತಂ, ಅಗ್ನಿ ಔರ್ ಬರ್ ಕಾ, ಫ್ಯೂಜಿಯಾಮ ಪ್ರಮುಖವಾದವು. ಇಂಗ್ಲಿಷ್, ಹಿಂದಿ, ಕನ್ನಡ ಭಾಷೆಗಳ ಮೇಲೆ ಅವರು ಪ್ರಭುತ್ವ ಸಾಧಿಸಿದ್ದರು. ರಾಷ್ಟ್ರೀಯ ನಾಟಕಶಾಲೆಯಲ್ಲಿ ಕೆಲಕಾಲ ಬೋಧನೆ ಮಾಡಿ, ರಂಗಭೂಮಿ ಅಧ್ಯಯನಕ್ಕಾಗಿ ...

READ MORE

Related Books