ಆಚಾರ್ಯ ಚಾಣಕ್ಯ

Author : ಕೆ.ಎಸ್‍. ನಾರಾಯಣಾಚಾರ್ಯ

Pages 248

₹ 360.00

Buy Now


Year of Publication: 2020
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 0836-2367676

Synopsys

ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರು ಆರ್ಥಿಕ ತಜ್ಞ ಹಾಗೂ ರಾಜನೀತಿಜ್ಞ ಎಂದೇ ಖ್ಯಾತಿಯ ಐತಿಹಾಸಿಕ ವ್ಯಕ್ತಿ ಚಾಣಕ್ಯನ ವ್ಯಕ್ತಿತ್ವ ಕುರಿತು ಬರೆದ ಕೃತಿ-ಆಚಾರ್ಯ ಚಾಣಕ್ಯ. ಚಂದ್ರಗುಪ್ತ ಮೌರ್ಯನನ್ನು ಅರಸನನ್ನಾಗಿ ಮಾಡಿ ನಂದ ಅರಸರ ವಿರುದ್ಧ ಸೇಡು ತೀರಿಸಿಕೊಂಡ ಚಾಣಕ್ಯರ ಜೀವನ ದರ್ಶನ, ಛಲ, ಗುರಿಯ ಮುಟ್ಟಲು ಅಗತ್ಯವಿರುವ ಸಂಕಲ್ಪ ಹೀಗೆ ವ್ಯಕ್ತಿತ್ವದ ಹತ್ತು ಹಲವು ಮುಖಗಳ ದರ್ಶನ ಮಾಡಿಸುವುದು ಈ ಕೃತಿ. 2013ರಲ್ಲಿ ಈ ಪುಸ್ತಕ ಮೊದಲ ಮುದ್ರಣ ಕಂಡಿತ್ತು.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books