ಆದಿಪುರಾಣ ಸಂಪುಟ-2

Author : ಪಿ. ವಿ. ನಾರಾಯಣ

Pages 600

₹ 1200.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560107
Phone: 080-22107809

Synopsys

’ಆದಿಪುರಾಣ’ವು ಮೇಲ್ನೋಟಕ್ಕೆ ಜೈನರಿಗೆ ಸೇರಿದ ಧರ್ಮ ಗ್ರಂಥವಾದರೂ ವಾಸ್ತವವಾಗಿ ಅದು ಬದುಕಿನ ಹುಡುಕಾಟವಾಗಿದೆ. ಮನುಷ್ಯಕುಲದ ಇತಿವೃತ್ತವನ್ನೇ ಅದು ಒಳಗೊಂಡಿದೆ. ಆದಿಪುರಾಣದ ಆರಂಭದಲ್ಲಿ ಮಾನವ ಸಂಕುಲವು ತನ್ನ ಅಸ್ತಿತ್ವದ ಆದಿಮ ಹಂತದಲ್ಲಿ ಪ್ರಕೃತಿಯೊಡನೆ ಹೊಂದಿಕೊಳ್ಳುವ ರೀತಿಯ ಕುರಿತ ಬಣ್ಣನೆಯಿದೆ. ನಂತರ ಹಂತದಲ್ಲಿ ಮಾನವರು ಎದುರಿಸುವ ಬದುಕಿನ ನಿತ್ಯನಿಗೂಢಗಳು ಹಾಗೂ ಇರುವಿಕೆಯ ಸಾರ್ಥಕತೆಯ ಪ್ರಶ್ನೆಗೆ ಉತ್ತರವನ್ನು ಕಂಡುಕೊಳ್ಳುವ ಪರಿಯನ್ನು ವಿವರಿಸುತ್ತದೆ.

About the Author

ಪಿ. ವಿ. ನಾರಾಯಣ
(18 December 1942)

ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.  ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ  ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...

READ MORE

Related Books