ಆಕಾಶಭೇರಿ

Author : ಸಿದ್ಧಲಿಂಗ ಪಟ್ಟಣಶೆಟ್ಟಿ

Pages 88

₹ 60.00




Year of Publication: 2011
Published by: ಅನನ್ಯ ಪ್ರಕಾಶನ, ಧಾರವಾಡ
Address: ಹೂಮನೆ, ಶ್ರೀದೇವಿನಗರ, ವಿದ್ಯಾಗಿರಿ, ಧಾರವಾಡ-580004
Phone: 94488 61604

Synopsys

ಹಿಂದಿ ನಾಟಕಕಾರರಾದ ಪೀಯೋಷ್ ಮಿಶ್ರ ಅವರ ನಾಟಕವನ್ನು ಕನ್ನಡಕ್ಕೆ ’ಆಕಾಶ ಭೇರಿ’ ಎಂಬ ಶೀರ್ಷಿಕೆಯಡಿ ತಂದವರು ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ.

ಭಗತ್ ಸಿಂಗ್ ಮತ್ತು ಅವನ ಅನುಚರರನ್ನು ಕೇಂದ್ರವಾಗಿಟ್ಟುಕೊಂಡು ಭಾರತದ ಸ್ವಾತಂತ್ಯ್ರ ಪ್ರಾಪ್ತಿಯ ಸಂದರ್ಭದಲ್ಲಿ ನಡೆದ ವ್ಯಾಪಕ ಮತ್ತು ವೈವಿಧ್ಯಪೂರ್ಣ ಹೋರಾಟಗಳ ಸರಣಿಯ ಚಿತ್ರಣವನ್ನು ಈ ನಾಟಕ ಕಟ್ಟಿಕೊಡುತ್ತದೆ. ಭಗತ್ ಸಿಂಗನ ಕಥಾನಕಗಳಲ್ಲಿ ಸೂಚಿತವಾದ ಅವನ ಪ್ರೇಯಸಿಯ ಪಾತ್ರ ಇಲ್ಲಿ ವಿಸ್ತಾರಗೊಂಡು ಭಾವನಾತ್ಮಕ ನೆಲೆಯನ್ನು ಸೃಷ್ಟಿಸುತ್ತದೆ. ಭಗತ್ ಸಿಂಗನ ಕನಸಿನ ಭಾರತದ ಪ್ರಸ್ತುತತೆ ಜೊತೆಗೆ ಸಮಕಾಲೀನ ಭಾರತದ ರಾಜಕಾರಣವನ್ನು ಪರಿಶೀಲಿಸಲಾಗಿದೆ.

About the Author

ಸಿದ್ಧಲಿಂಗ ಪಟ್ಟಣಶೆಟ್ಟಿ
(03 November 1939)

ಕವಿ-ಅನುವಾದಕ-ಅಂಕಣಕಾರರಾಗಿ ಚಿರಪರಿಚಿತರಿರುವ ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು ಜನಿಸಿದ್ದು 1939ರ ನವಂಬರ್ ೩ರಂದು. ಧಾರವಾಡ ಸಮೀಪದ ಯಾದವಾಡ ಎಂಬ ಹಳ್ಳಿಯಲ್ಲಿ ಜನಿಸಿದ ಅವರು ಒಂದೂವರೆ ವರ್ಷದವರಿರುವಾಗಲೇ ತಂದೆಯನ್ನು ಕಳೆದುಕೊಂಡರು. ಕಡು ಬಡತನದಿಂದಾಗಿ ತಾಯಿಯ ತವರು ಮನೆ ಮನಗುಂಡಿ ಸೇರಿದರು. ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದರು. ಶಿಕ್ಷಣ ಮುಂದುವರಿಸುವ ದೃಢ ಸಂಕಲ್ಪದಿಂದ ತಾಯಿಯೊಂದಿಗೆ ಮತ್ತೆ ಧಾರವಾಡಕ್ಕೆ ಬಂದ ಅವರು  ಹಿಂದೀ ಎಂ.ಎ., ಪಿಎಚ್.ಡಿ. ಪದವಿಗಳನ್ನು ಪಡೆದರು. ಒಂದು ವರ್ಷ ಹೈಸ್ಕೂಲ್ ಶಿಕ್ಷಕ, ಒಂದು ವರ್ಷ ಶಿರಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದು, 1966 ರಿಂದ 1999ರ ವರೆಗೆ ಕರ್ನಾಟಕ ...

READ MORE

Related Books