ಅಭಿವೃದ್ದಿಯ ಅಂಧಯುಗ

Author : ನಾಗೇಶ ಹೆಗಡೆ

Pages 160

₹ 110.00




Year of Publication: 2010
Published by: ಭೂಮಿ ಬುಕ್ಸ್
Address: # ಮಳಿಗೆ ಸಂಖ್ಯೆ 150, 1ನೇ ಮೇನ್, 2ನೇ ಮುಖ್ದರಸ್ತೆ, ಶ್ರೀರಾಮಪುರ, ಶೇಷಾದ್ರಿಪುರಂ, ಬೆಂಗಳೂರು-560020.
Phone: 0802356 5885

Synopsys

ಲೇಖಕ ನಾಗೇಶ ಹೆಗಡೆ ಅವರ ಕೃಷಿ ಮತ್ತು ಪರಿಸರ ಚಿಂತನೆಗಳ ಬರಹ ಸಂಕಲನ ‘ಅಭಿವೃದ್ಧಿಯ ಅಂಧಯುಗ’. ದೇಶ ಕಟ್ಟುವ ಕೆಲಸವನ್ನು ಖಾಸಗಿ ಒಡೆತನದ ಸಂಸ್ಥೆಗಳಿಗೆ ಒಪ್ಪಿಸಿದ ಮೇಲೆ, ದೋಚಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಬರೀ 15 ವರ್ಷಗಳಲ್ಲಿ ನಮ್ಮ ಶತಕೋಟ್ಯಾಧೀಶರ ಸಂಖ್ಯೆ ಐವತ್ತಕ್ಕೇರಿದೆ. ಇದರಿಂದ ಸಾಮಾನ್ಯ ಪ್ರಜೆ ಗೌರವಯುತ ಬದುಕನ್ನು ನಡೆಸಲಾಗದೆ ಲಕ್ಷಾಂತರ ಜನ ಜೀವ ಹರಣ ಮಾಡಿಕೊಂಡಿದ್ದಾರೆ. ನಮ್ಮ ದಿನ ನಿತ್ಯದ ಬದುಕಿನಲ್ಲಿ ಗ್ರಹಿಕೆಗೆ ಬಾರದ ಇಂತಹ ಅದೆಷ್ಟೋ ಸಂಗತಿಗಳು ದೇಶವನ್ನು ಸಂಕಷ್ಟಕ್ಕೆ ತಳ್ಳುತ್ತಿವೆ. ಅಂತಹ ಅವಿತು ಕುಳಿತ ಮುಖಗಳನ್ನು ಕೃತಿಯಲ್ಲಿ ಪರಿಚಯಿಸಲಾಗಿದೆ.

About the Author

ನಾಗೇಶ ಹೆಗಡೆ
(14 February 1948)

ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರಾದ ನಾಗೇಶ ಹೆಗಡೆ ಅವರ ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಕ್ಕಮನೆ. ಮಾಧ್ಯಮಿಕ ಶಿಕ್ಷಣವನ್ನು ಯಡಳ್ಳಿಯ ವಿದ್ಯೋದಯ ಹೈಸ್ಕೂಲಿನಲ್ಲಿ ಪೂರೈಸಿದ ಅವರು ಶಿರಸಿಯ ಮೋಟಿನಸರ ಸ್ಮಾರಕ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭೂವಿಜ್ಞಾನದಲ್ಲಿ ಬಿಎಸ್‍ಸಿ ಮುಗಿಸಿದರು. ಖರಗಪುರ ಐಐಟಿಯಲ್ಲಿ ಆನ್ವಯಿಕ ಭೂವಿಜ್ಞಾನದಲ್ಲಿ ಎಂಎಸ್‍ಸಿ (ಟೆಕ್) ಮಾಡಿದರು. ದೆಹಲಿಯ ಜವಾಹರಲಾಲ ನೆಹರು ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದಲ್ಲಿ ಎಂ.ಫಿಲ್ ಮಾಡಿದರು. ಶಿಕ್ಷಕ, ಪರಿಸರವಾದಿ ಹಾಗೂ ಪತ್ರಕರ್ತರಾಗಿ ವಿಭಿನ್ನ ಪಾತ್ರಗಳನ್ನು ವಹಿಸುತ್ತಿರುವ ನಾಗೇಶ ಹೆಗಡೆ ಸುಧಾ ವಾರಪತ್ರಿಕೆಯ ಸಹಾಯಕ ಸಂಪಾದಕರಾಗಿದ್ದರು. ಕನ್ನಡದಲ್ಲಿ ವಿಜ್ಞಾನ-ತಂತ್ರಜ್ಞಾನದ ಲೇಖನಗಳನ್ನು ಬರೆದಿರುವ ...

READ MORE

Related Books