ಅಗ್ನಿಸಾಕ್ಷಿ

Author : ಕೆ.ಕೆ. ನಾಯರ್

Pages 114

₹ 240.00




Year of Publication: 2010
Published by: ಸಾಹಿತ್ಯ ಅಕಾಡೆಮಿ
Address: ದೆಹಲಿ

Synopsys

‘ಅಗ್ನಿಸಾಕ್ಷಿ’ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಮಲಯಾಳಂ ಕಾದಂಬರಿಯ ಕನ್ನಡಾನುವಾದ. ಲಲಿತಾಂಬಿಕಾ ಅಂತರ್ಜನಂ ಅವರ ಮಲಯಾಳಂ ಕಾದಂಬರಿಯನ್ನು ಕೆ.ಕೆ. ನಾಯರ್ ಅವರು ಕನ್ನಡೀಕರಿಸಿದ್ದಾರೆ. ನಂಬೂದರಿ ಬ್ರಾಹ್ಮಣ ಕುಟುಂಬದ ಕತೆಯ ಮೂಲಕ ಸಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಈ ಕೃತಿ ಮಹಿಳಾ ಸಮಾನತೆಯ ಕುರಿತು ಮಾತನಾಡುತ್ತದೆ. ಮೂಲ ಕೃತಿಗೆ ಧಕ್ಕೆಯಾಗದಂತೆ ಅತ್ಯಂತ ಸರಳ ಭಾಷೆಯಲ್ಲಿ ಕೃತಿಯನ್ನು ಅನುವಾದಿಸಿದ್ದಾರೆ.

About the Author

ಕೆ.ಕೆ. ನಾಯರ್ - 21 January 2014)

ಭಾಷಾಂತರಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಲೇಖಕ ಕೆ. ಕೆ. ನಾಯರ್. ಕೆ. ಕೆ. ನಾಯರ್ ಅವರು ಜನಿಸಿದ್ದು ಉತ್ತರ ಕೇರಳದ ಪುಟ್ಟ ಗ್ರಾಮ ಅರತ್ತಿಲ್‌ನಲ್ಲಿ. ಬಡತನದ ಕಾರಣದಿಂದ ಬಾಲ್ಯದಲ್ಲಿಯೇ ಮಣಿಪಾಲಕ್ಕೆ ವಲಸೆ ಬಂದರು.  ಮಲಯಾಳಂನಿಂದ ಕನ್ನಡಕ್ಕೆ 16 ಕಾದಂಬರಿ, 7 ಕಾವ್ಯ, 5 ಸಣ್ಣ ಕಥೆಗಳ ಸಂಗ್ರಹ ಅನುವಾದಿಸಿದ್ದಾರೆ. ಅವರು ’ಒಂದು ಆತ್ಮ ಕಥನ’ (ಕುಂಞಪ್ಪ) ಮಾತ್ರ ಕನ್ನಡದಲ್ಲಿ ರಚಿಸಿದ್ದಾರೆ. ಕನ್ನಡದಿಂದ ಮಲಯಾಳಕ್ಕೆ ಐದು ಕಾದಂಬರಿ ಅನುವಾದಿಸಿರುವ ಅವರು ತಗಳಿ ಶಿವಶಂಕರ ಪಿಳ್ಳೈ ಅವರ ಮಲಯಾಳ ಕೃತಿ ‘ಕಯರ್ ’ಅನ್ನು ’ಹಗ್ಗ’ ಎಂದು ಭಾಷಾಂತರಿಸಿದ್ದರು. ಅದಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾಂತರ ಪ್ರಶಸ್ತಿ ...

READ MORE

Related Books