ಅಲ್ಲಮಪ್ರಭು

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 96

₹ 40.00




Year of Publication: 2010
Published by: ಸಾಗರ್ ಪ್ರಕಾಶನ
Address: ಬೆಂಗಳೂರು

Synopsys

ಅ.ನ.ಕೃ ಅವರ ಕೃತಿ ಅಲ್ಲಮಪ್ರಭು. ಈ ಪುಸ್ತಕವು 2010-2013 ರಲ್ಲಿ ಐಚ್ಛಿಕ ಕನ್ನಡ, ಬಿ.ಎ., ಪದವಿಗೆ ಪಠ್ಯಪುಸ್ತಕವಾಗಿತ್ತು. ಈ ಪುಸ್ತಕ ಅಲ್ಲಮಪ್ರಭುವಿನ ಜೀವನಚರಿತ್ರೆಯಲ್ಲ. ಅವರ ಭೌತಿಕ ಜೀವನದ ಮುಖ್ಯ ಹಂತಗಳು ಮತ್ತು ಜೀವನ ದರ್ಶನದ ಬಗ್ಗೆ ಅ.ನ.ಕೃಷ್ಣರಾಯರು ಬೇರೆ ಬೇರೆ ಸಂದರ್ಭದಲ್ಲಿ ಬರೆದ ಲೇಖನಗಳ ಸಂಗ್ರಹವಿದು. ಅಲ್ಲಮಪ್ರಭುವಿನ ಹಲವಾರು ವಚನಗಳನ್ನೂ ಈ ಪುಸ್ತಕದಲ್ಲಿ ಸೇರಿಸಿದ್ದಾರೆ. ಪ್ರಥಮ ಮುದ್ರಣ1959, 3ನೇ ಮುದ್ರಣ 2010.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books