ಅಲ್ಲಮಪ್ರಭು ಮತ್ತು ಶೈವ ಪ್ರತಿಭೆ

Author : ಡಿ. ಆರ್. ನಾಗರಾಜ್

Pages 240

₹ 240.00




Year of Publication: 2022
Published by: ಅಕ್ಷರ ಪ್ರಕಾಶನ
Address: ಅಕ್ಷರ ಪ್ರಕಾಶನ, ಹೆಗ್ಗೋಡು, ಹೊನ್ನೇಸರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417.
Phone: 08183 - 295645 / 9480280401

Synopsys

ಅಲ್ಲಮನನ್ನು ಅವನ ಕಾಲದಲ್ಲಿಟ್ಟು ನೋಡುವಂತೆಯೇ, ತಮ್ಮ ಕಾಲದ ದೃಷ್ಟಿಯಿಂದಲೂ ವಿಶ್ಲೇಷಿಸುವ ನಾಗರಾಜರ ಪ್ರತಿಭೆ ಅಸಾಮಾನ್ಯ ಶಕ್ತಿಯುಳ್ಳದ್ದು. ಏಕಕಾಲದಲ್ಲೆ ದಾರ್ಶನಿಕನೂ, ಕವಿಯೂ ಆದ ಅಲ್ಲಮನನ್ನು, ತತ್ಪರವಾಗಿ ಅರಿಯುವ ಪ್ರಯತ್ನ ಇಲ್ಲಿ ಆಗಿದೆ. ಈ ಕೃತಿಯ ಉದ್ದಕ್ಕೂ ಸೂಕ್ಷ್ಮವಾಗಿ, ವಿದ್ವತ್ಪೂರ್ಣವಾಗಿ ಲೇಖಕರು ಅದನ್ನು ಕಟ್ಟಿಕೊಟ್ಟಿದ್ದಾರೆ. ಗಾಢವಾದ ಒಳನೋಟಗಳಿಂದ ಬೆಳಗುವ ಗದ್ಯಶೈಲಿಯನ್ನು ಇಲ್ಲಿ ಕಾಣಬಹುದು. ಓದುಗನ ಪ್ರಜ್ಞೆಯನ್ನೇ ಪರಿಷ್ಕರಿಸಿ ಉಲ್ಲಾಸದಲ್ಲಿ ಹಿಗ್ಗುವಂತೆ ಮಾಡುವ ಈ ಕೃತಿ, ಪ್ರಪಂಚದ ಯಾವ ಭಾಷೆಯಲ್ಲಾದರೂ ಉತ್ಕೃಷ್ಟ ಕೃತಿ ಎನ್ನಿಸಿಕೊಂಡೀತು. ಈ ಕೃತಿ ಕನ್ನಡ ಸಾರಸ್ವತ ಲೋಕದಲ್ಲಿ ಗಂಭೀರವಾದ ಚರ್ಚೆಗೆ ನಾಂದಿ ಹಾಡಿದೆ.

About the Author

ಡಿ. ಆರ್. ನಾಗರಾಜ್
(20 February 1954 - 12 August 1998)

ಕನ್ನಡದ ಖ್ಯಾತ ವಿಮರ್ಶಕ ಹಾಗೂ ಚಿಂತಕರಾದ ಡಾ.ಡಿ.ಆರ್.ನಾಗರಾಜು ಅವರು ಹುಟ್ಟಿದ್ದು ದೊಡ್ಡಬಳ್ಳಾಪುರದಲ್ಲಿ. ತಂದೆ ರಾಮಯ್ಯ, ತಾಯಿ ಅಕ್ಕಯ್ಯಮ್ಮ. ದೊಡ್ಡಬಳ್ಳಾಪುರದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ನಾಗರಾಜ್ ಪ್ರೌಢ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಬಂದರು. ಅಂದಿನ ಸರ್ಕಾರಿ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯಾದ ಅವರು ಆನರ್ಸ್ ಪದವಿಯನ್ನು ಅಲ್ಲಿಯೇ ಪಡೆದರು. ಮುಂದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ ಪದವಿ ಪಡೆದ ಡಿ.ಆರ್ ಸ್ವಲ್ಪ ಕಾಲ ಸಂಶೋಧಕ ವೃತ್ತಿಯಲ್ಲಿದ್ದು ಅಲ್ಲಿಯೇ ಕನ್ನಡ ಅಧ್ಯಾಪಕರಾದರು. ಪ್ರವಾಚಕರಾದರು, ಜೊತೆಗೆ ಕೈಲಾಸಂ ಪೀಠದ ಸಂದರ್ಶಕ ಪ್ರಾಧ್ಯಾಪಕರೂ ಆದರು. ಕನ್ನಡದ ವಿಮರ್ಶೆಗೆ ಸಾಂಸ್ಕೃತಿಕ ಆಯಾಮವನ್ನು ಒದಗಿಸಿದ ನಾಗರಾಜ್ ಅಮೆರಿಕದ ...

READ MORE

Related Books