ಅಂಬೇಡ್ಕರ್‌ ದೃಷ್ಟಿಯಲ್ಲಿ ಸಾಮಾಜಿಕ ನ್ಯಾಯ

Author : ಬಿ. ಸುಜ್ಞಾನಮೂರ್ತಿ

Pages 88

₹ 70.00




Year of Publication: 2017
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ಸಾಮಾಜಿಕ ನ್ಯಾಯ ಎಂಬುದು ಸಂವಿಧಾನಶಿಲ್ಪಿ ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಹೇಗಿತ್ತು ಎಂಬುದನ್ನು ಅವಲೋಕಿಸುವ ಕೃತಿ ಇದು. ಹಾಗೆ ಅವಲೋಕಿಸುತ್ತಲೇ ವರ್ತಮಾನದ ಸಂಘರ್ಷಮಯ ವಾತಾವರಣವನ್ನು ಅದು ಒರೆಗೆ ಹಚ್ಚುತ್ತದೆ. ಅಂಬೇಡ್ಕರ್ ದೃಷ್ಟಿಯಲ್ಲಿ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಂವಿಧಾನ-ಸಾಮಾಜಿಕ ನ್ಯಾಯ, ಮೂಲಭೂತ ಹಕ್ಕುಗಳು, ಸ್ವಾತಂತ್ರ ಹಕ್ಕುಗಳು, 17 ನೇ ವಿಧಿ, ಹಿಂದೂ ಕೋಡ್ ಬಿಲ್ ಮೊದಲಾದ ಅಧ್ಯಾಯಗಳ ಮೂಲಕ ಸಾಮಾಜಿಕ ನ್ಯಾಯದ ವಿವಿಧ ನೆಲೆಗಳನ್ನು ಚರ್ಚಿಸಲಾಗಿದೆ.

ಜಾತಿಯನ್ನು ಮೀರುವುದು, ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು, ಕೆಳಜಾತಿಗಳ ಜನರಲ್ಲಿ ವಿಶ್ವಾಸ ತುಂಬುವುದು ಅಂಬೇಡ್ಕರ್‌ ಅವರ ಕನಸಾಗಿತ್ತು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವಗಳ ಆಧಾರದ ಮೇಲೆ ಅವರು ಕಟ್ಟಿದ ಸಾಮಾಜಿಕ ನ್ಯಾಯತತ್ವ ದೊಡ್ಡ ಆಲದಮರವಾಗಿ ಬೆಳೆದಿದೆ. ಆದರೂ ಸಮಾನತೆಯಿಲ್ಲದ ಸ್ವಾತಂತ್ಯ್ರ ದೇಶಕ್ಕೆ ಬಂತು. ಅದು ಉಂಟು ಮಾಡಿರುವ ಅನಾಹುತಗಳನ್ನು ಪುಸ್ತಕ ತೆರೆದಿಡುತ್ತದೆ. ಮತ್ತೊಂದೆಡೆ ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ್ದೂ ಸಾಮಾಜಿಕ ನ್ಯಾಯದ ಭಾಗವೇ ಆಗಿತ್ತು ಎಂಬ ವಿಶ್ಲೇಷಣೆ ಇದೆ. 

About the Author

ಬಿ. ಸುಜ್ಞಾನಮೂರ್ತಿ
(06 July 1960)

ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...

READ MORE

Related Books