ಅಂಬೇಡ್ಕರ್ ಭಾರತ

Author : ಎಚ್.ಟಿ. ಪೋತೆ

Pages 292

₹ 250.00




Year of Publication: 2016
Published by: ಸಪ್ನ ಬುಕ್ ಹೌಸ್
Address: ಆರ್ ಒ#11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು - 560 009
Phone: 080-40114455

Synopsys

‘ಅಂಬೇಡ್ಕರ್ ಭಾರತ’ ಲೇಖಕ ಎಚ್.ಟಿ. ಪೋತೆ ಅವರ ಕೃತಿ. ಇಲ್ಲಿ ಅಂಬೇಡ್ಕರ್ ಚಿಂತನೆ ಹಾಗೂ ಅವರ ಸಮಕಾಲೀನರ ಚಿಂತನೆಗಳನ್ನು ತೌಲನಿಕವಾಗಿ ಅಭ್ಯಾಸ ಮಾಡಲಾಗಿದೆ. ಅಂಬೇಡ್ಕರ್ ಪೂರ್ವ ಭಾರತ, ಅಂಬೇಡ್ಕರ್ ಭಾರತ ಹಾಗೂ ಅಂಬೇಡ್ಕರೋತ್ತರ ಭಾರತದ ಕುರಿತು ವ್ಯಾಪಕ ಚರ್ಚೆಗಳಿವೆ. ವ್ಯಾಪಕ ಓದು, ತರ್ಕ ಬದ್ಧ ಹಾಗೂ ವಸ್ತು ನಿಷ್ಠ ವಿಶ್ಲೇಷಣೆ, ನಿರರ್ಗಳವಾದ ಭಾಷಾ ಬಳಕೆ, ಗೊಂದಲ ರಹಿತ ನಿರೂಪಣೆ ಎಲ್ಲವೂ ಈ ಕೃತಿಯ ಮೌಲ್ಯವನ್ನು ಹೆಚ್ಚಿಸಿವೆ. ದಲಿತ ಲೋಕದ ತಲ್ಲಣಗಳನ್ನು ವಿಭಿನ್ನ ದೃಷ್ಠಿಕೋನದಿಂದ ಚರ್ಚಿಸಿರುವುದು ಈ ಪುಸ್ತಕದ ಮತ್ತೊಂದು ವಿಶೇಷ. ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2017ನೇ ಸಾಲಿನ ಪುಸ್ತಕ ಬಹುಮಾನ ಲಭಿಸಿದೆ.

About the Author

ಎಚ್.ಟಿ. ಪೋತೆ

ಕಥೆಗಾರ, ವಿಮರ್ಶಕ, ಅನುವಾದಕ, ಚಿಂತಕ, ಜಾನಪದ ವಿದ್ವಾಂಸ ಹಾಗೂ ಸಂಶೋಧಕರಾದ ಪ್ರೊ. ಎಚ್.ಟಿ.ಪೋತೆ ಬಿಸಿಲನಾಡಿನ ದಿಟ್ಟಪ್ರತಿಭೆ. ಬುದ್ದ. ಬಸವ, ಅಂಬೇಡ್ಕರ್, ಫುಲೆ, ಪೆರಿಯಾರ್, ಬಿ. ಶ್ಯಾಮಸುಂದರ್ ಚಿಂತನೆಗಳ ನೆಲೆಯಲ್ಲಿ ಸಾಹಿತ್ಯ ಕೃಷಿಗೈದವರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಂಜಗಿ ಪೋತೆಯವರ ಜನ್ಮಸ್ಥಳ, ಗುಲ್ಬರ್ಗಾ ವಿವಿಯಿಂದ ಎಂ.ಎ, ಎಂ.ಫಿಲ್, ಪಿಎಚ್ಡಿ. ಅಂಬೇಡ್ಕರ್ ಕುರಿತಾದ ಕನ್ನಡದ ಮೊದಲ ಡಿ.ಲಿಟ್ ಪಡೆದ ಹೆಗ್ಗಳಿಕೆ. ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕ, ಪ್ರಸಾರಂಗದ ನಿರ್ದೇಶಕ, ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ, ಕರ್ನಾಟಕ ವಿವಿ ಮೌಲ್ಯಮಾಪನ ಕುಲಸಚಿವರಾಗಿ ಅವರದ್ದು ಬಹುರೂಪಿ ಶೈಕ್ಷಣಿಕ ...

READ MORE

Related Books