ಅಂಬೇಡ್ಕರ್ ದೃಷ್ಟಿಯಲ್ಲಿ ದಲಿತರು ಮತ್ತು ಮತಾಂತರ

Author : ಎನ್. ಚಿನ್ನಸ್ವಾಮಿ ಸೋಸಲೆ

Pages 224

₹ 200.00




Year of Publication: 2012
Published by: ಯಾಜಿ ಪ್ರಕಾಶನ
Address: ಭೂಮಿ, ಎಂ.ಪಿ. ಪ್ರಕಾಶ್ ನಗರ, ಹೊಸಪೇಟೆ, ಬಳ್ಳಾರಿ- 583201
Phone: 9481042400

Synopsys

‘ಅಂಬೇಡ್ಕರ್ ದೃಷ್ಟಿಯಲ್ಲಿ ದಲಿತರು ಮತ್ತು ಮತಾಂತರ’ -ಚಿನ್ನಸ್ವಾಮಿ ಸೋಸಲೆ ಅವರ ಕೃತಿ. ಈ ಕೃತಿಯಲ್ಲಿ ದಲಿತರ ಮತಾಂತರದ ಕುರಿತಾಗಿ ಅಂಬೇಡ್ಕರ್ ಅವರ ವಿಚಾರಗಳಿವೆ. ದಲಿತರ ಮೇಲೆ ಹಿಂದೂ ಧರ್ಮದ ಶೋಷಣೆಯಿಂದ ಬೇಸತ್ತ ಅಂಬೇಡ್ಕರ್ ಧರ್ಮದ ಕಪಿಮುಷ್ಠಿಯಿಂದ ತನ್ನ ಜನರನ್ನು ಬಿಡುಗಡೆಗೊಳಿಸಲು ಶ್ರಮಿಸಿದರು. ಮತಾಂತರದ ಬಗ್ಗೆ ಅಂಬೇಡ್ಕರ್ ಅವರಿಗೆ ಅತ್ಯಂತ ಧೃಡವಾದ ನಿಲುವಿತ್ತು ಆ ಕುರಿತಾಗಿ ಅವರ ಬರಹಗಳನ್ನು ಲೇಖಕ ಚಿನ್ನಸ್ವಾಮಿ ಸೋಸಲೆ ಈ ಕೃತಿಯಲ್ಲಿ ದಾಖಲಿಸಿದ್ದಾರೆ.

About the Author

ಎನ್. ಚಿನ್ನಸ್ವಾಮಿ ಸೋಸಲೆ
(20 May 1968)

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎನ್ ಚಿನ್ನಸ್ವಾಮಿ ಸೋಸಲೆ ಅವರು ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದವರು. 1968ರ ಮೇ 20 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣ ಸ್ವಗ್ರಾಮದಲ್ಲಿ ಮುಗಿಸಿ, ಪ್ರೌಢ ಶಿಕ್ಷಣದಿಂದ ಮುಂದಿನ ಓದು ಮೈಸೂರಿನಲ್ಲಿ ನಡೆಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ’ಆಧುನಿಕ ಮೈಸೂರು  ಸಂಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ( 1881-1940)’ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿ (2001) ಪಡೆದರು.  ನಮ್ಮ ಗ್ರಾಮಗಳು ಅಂದು ಇಂದು,  ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನ, ಭಾರತೀಯ ಸಮಾಜ ಮತ್ತು ದಲಿತರು, ಕರ್ನಾಟಕ ಚರಿತ್ರೆ ಮತ್ತು ಸಾಹಿತ್ಯ, ದಲಿತ ಚರಿತ್ರೆ ...

READ MORE

Related Books