ಅಮೃತ ಸಿಂಧು

Author : ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)

Pages 166

₹ 100.00




Year of Publication: 2014
Published by: ಸುಧಾ ಎಂಟರ್‍ ಪ್ರೈಸಸ್
Address: #3036, 5ನೇ ಮುಖ್ಯರಸ್ತೆ, ಬಿ.ಎಸ್.ಕೆ 2ನೇ ಹಂತ, 14ನೇ ಕ್ರಾಸ್ ರೋಡ್, ತ್ಯಾಗರಾಜ್ ನಗರ, ಬೆಂಗಳೂರು-560085
Phone: 98454 49811

Synopsys

"ನಿನಗೆ ಸ್ವಾಭಾವಿಕವಾಗಿರುವ ಶಕ್ತಿ ಮತ್ತು ನೀನು ಮಾಡಬೆಕಾದ ಕೆಲಸಗಳೆರಡಕ್ಕೂ ಮಿತಿ ಇದೆ. ಅದನ್ನು ಮೀರಿದರೆ ಕೆಲಸವಾಗದು. ಆದರೆ ಈ ಮಿತಿ ಮತ್ತು ಅತಿಗಳ ವ್ಯತ್ಯಾಸವನ್ನು ತಿಳಿದುಕೊಳ್ಳುವುದೇ ಕಷ್ಟ. ನೀನು ಮಾಡಬೇಕಾದದ್ದು ಇಷ್ಟೇ: ನಿನಗೆ ಹಿತವೆನಿಸಿದ್ದನ್ನು ಮಾಡು, ಮಿಕ್ಕಿದ್ದನ್ನು ದೇವರಿಗೆ ಬಿಡು. ದೇವರಿಗೂ ಸ್ವಲ್ಪ ಕೆಲಸವಿರಲಿ" ಅನ್ನೋ ಮಾತಿದೆ ಈ ಅಮೃತ ನುಡಿಗಳನ್ನು ಸದಾ ನೆನಪಿನಲ್ಲಿಟ್ಟುಕೊಂಡೇ, ಸಾಯಿಸುತೆಯವರು ಈ ಕಾದಂಬರಿಯನ್ನು ಬರೆದು ಮುಗಿಸಿದ್ದಾರೆ.

About the Author

ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)
(20 August 1942)

ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ.  ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...

READ MORE

Related Books