ಶೈಲಜಾ ಸುರೇಶ್ ಸಂಪಾದಿತ ಕಥಾ ಸಂಕಲನ -ಅನಾವರಣ. ಲೇಖಿಕಾ ಸಾಹಿತ್ಯ ವೇದಿಕೆಯು ರಾಜ್ಯೋತ್ಸವ ಹಾಗೂ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ಆಯ್ದ ಬಹುಮಾನಿತ ಹಾಗೂ ಅತ್ಯುತ್ತಮ ಕಥೆಗಳನ್ನು ಇಲ್ಲಿ ಸಂಗ್ರಹಿಸಿ ನೀಡಲಾಗಿದೆ. ವಸ್ತು, ಪಾತ್ರ, ನಿರೂಪಣೆ, ಸನ್ನಿವಶಗಳ ಶಿಸ್ತು ಕೌಶಲ ಇತ್ಯಾದಿ ಅಂಶಗಳ ಹಿನ್ನೆಲೆಯಲ್ಲಿ ಕಥೆಗಳನ್ನು ಆಯ್ಕೆ ಮಾಡಲಾಗಿದೆ. ಇಲ್ಲಿಯ ಎಲ್ಲ 26 ಕಥೆಗಳು ವಿಷಯ ವೈವಿಧ್ಯತೆಯಿಂದ ಕಂಗೊಳಿಸುತ್ತವೆ.
ಶೈಲಜಾ ಸುರೇಶ್ (ದಾಕ್ಷಾಯಿಣಿ ಎಚ್.), ಬಿ.ಎ. ಪದವೀಧರರು. 1964ರ ಅಕ್ಟೋಬರ್ 2 ರಂದು ಹಾಸನದಲ್ಲಿ ಜನನ. ತಂದೆ ಹೆಚ್. ಹನುಮಂತಪ್ಪ, ತಾಯಿ- ಸಾವಿತ್ರಮ್ಮ. ಕಾದಂಬರಿ : ಇಂದಿರಾ 2004, ಹೃದಯರಾಗ 2006, ಬಾಳಿನ ಹೊಂಬೆಳಕು 2008, ಕಥಾಸಂಕಲನ : ಹೊಂಗನಸು 2012ರಲ್ಲಿ ಪ್ರಕಟವಾಗಿವೆ. ಸಣ್ಣಕತೆ ಹಾಗೂ ನಾಟಕಗಳನ್ನು ರಚಿಸಿದ್ದು ಹವ್ಯಾಸಿ ಪತ್ರಕರ್ತೆ ಕೂಡ. ಆಕಾಶವಾಣಿ, ದೂರದರ್ಶನಕ್ಕಾಗಿ ಹಲವು ಬರೆಹಗಳನ್ನು ನೀಡಿದ್ದಾರೆ. ಅವರು ಲೇಖಕಿಯರ ಸಾಹಿತ್ಯ ವೇದಿಕೆಯ ಅಧ್ಯಕ್ಷರು. ಇವರಿಗೆ ಅತ್ತಿಮಬ್ಬೆ ಸಾಹಿತ್ಯ ಪ್ರಶಸ್ತಿ, ದೇವರ ದಾಸಿಮಯ್ಯ ಪ್ರಶಸ್ತಿ, ಸಾಹಿತ್ಯ ಸೇತು ಪ್ರಶಸ್ತಿ, ಗೌರವಹುದ್ದೆ : ಹಾಸನ ಜಿಲ್ಲಾ ಕನ್ನಡ ಲೇಖಕಿಯರ ...
READ MORE