ಅನಕೃ ಮತ್ತು ಕನ್ನಡ ಸಂಸ್ಕೃತಿ

Author : ನರಹಳ್ಳಿ ಬಾಲಸುಬ್ರಹ್ಮಣ್ಯ

Pages 112

₹ 100.00




Year of Publication: 2018
Published by: ಅಭಿನವ ಪ್ರಕಾಶನ
Address: 17/18-2, ಮೊದಲನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

ಕನ್ನಡ ಸಾಹಿತ್ಯ ಲೋಕದ ಪ್ರಮುಖ ಕಾದಂಬರಿಕಾರ, ಲೇಖಕರಾದ ಅ.ನ. ಕೃಷ್ಣರಾಯರ (ಅನಕೃ) ವ್ಯಕ್ತಿತ್ವಕ್ಕೆ ಅನೇಕ ಮುಖಗಳಿವೆ. ಭಾರತೀಯ ಸಂದರ್ಭದಲ್ಲಿ ಅದರಂತೆ ಸಾಹಿತ್ಯ, ಸಂಗೀತ, ನೃತ್ಯ, ಚಿತ್ರ, ಶಿಲ್ಪ, ರಂಗಭೂಮಿ, ಸಿನಿಮಾ, ಪತ್ರಿಕೋದ್ಯಮ, ಚಳವಳಿ - ಹೀಗೆ ಹಲವು ನೆಲೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು ಬೆರಳೆಣಿಕೆಯಷ್ಟು, ಕನ್ನಡ ಸಂಸ್ಕೃತಿ ಚರಿತ್ರೆಯನ್ನು ರೂಪಿಸಿದ ಪ್ರಮುಖರಲ್ಲಿ ಅ.ನ. ಕೃಷ್ಣರಾಯರು ಒಬ್ಬರು.

ಆಕರ್ಷಕ ಕಥನಶೈಲಿ ಅವರ ವೈಶಿಷ್ಟ್ಯ ಅವರು ಕನ್ನಡ ಗದ್ಯವನ್ನು ಬೆಳೆಸಿದ ರೀತಿ ಒಂದು ಉಜ್ವಲ ಆಧ್ಯಾಯ. ಭಾರತೀಯ ಸಮಾಜ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿ  ತನ್ನ ರಚನೆಯ ಮೂಲವಿನ್ಯಾಸಗಳನ್ನೇ ಕಳೆದುಕೊಳ್ಳುತ್ತಿದ್ದ ಸಂಧಿಕಾಲದಲ್ಲಿ ರೂಪುಗೊಂಡ ಅವರ ಬರವಣಿಗೆ ಆ ಕಾಲದ ಸಾಮಾಜಿಕ ಚರಿತ್ರೆಯನ್ನು ಕಟ್ಟಿಕೊಡುತ್ತದೆ. ಅನಕೃ ಅವರಿಗೆ ಕನ್ನಡವೆಂದರೆ ಕೇವಲ ಬರವಣಿಗೆ ಮಾತ್ರವಾಗಿರಲಿಲ್ಲ, ಬದುಕಿನ ಎಲ್ಲ ರಂಗಗಳಲ್ಲೂ 'ಕನ್ನಡತನ' ಕಾಣಿಸಬೇಕೆಂದು ಆಶಿಸಿದ್ದರು; ಅದಕ್ಕಾಗಿ ಶ್ರಮಿಸಿದರು. ಅಪಾರ ಜನಪ್ರೀತಿ ಪಡೆದ ಅನಕೃ ಸಾಧನೆಯನ್ನು ಒಟ್ಟಂದದಲ್ಲಿ ಹಿಡಿಯುವ ಪ್ರಯತ್ನ 'ಅನಕೃ ಮತ್ತು ಕನ್ನಡ ಸಂಸ್ಕೃತಿ'. ನರಹಳ್ಳಿಯವರ 'ಸಮಗ್ರ ಓದಿನ' ಪರಿಕಲ್ಪನೆ ಈ ಕೃತಿಯ ರಚನೆಯಲ್ಲಿ ಕಾಣಬಹುದು. 

About the Author

ನರಹಳ್ಳಿ ಬಾಲಸುಬ್ರಹ್ಮಣ್ಯ
(05 September 1953)

ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರು. ಮಂಡ್ಯ ಜಿಲ್ಲೆಯ ನರಹಳ್ಳಿಯಲ್ಲಿ1953 ಸೆಪ್ಟೆಂಬರ್ 5ರಂದು ಜನಿಸಿದರು. 1973ರಲ್ಲಿ ಬಿ.ಎ. (ಆನರ್), 1975ರಲ್ಲಿ ಎಂ.ಎ. ಪದವಿಗಳನ್ನು ಪ್ರಥಮ ಬ್ಯಾಂಕ್, ಚಿನ್ನದ ಪದಕಗಳೊಂದಿಗೆ ಪಡೆದ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ರಾಜ್ಯಪ್ರಶಸ್ತಿ ಮನ್ನಣೆ ಗಳಿಸಿದ್ದರು. ಭಾರತ ಸರ್ಕಾರದ ಪ್ರತಿಭಾ ವಿದ್ಯಾರ್ಥಿವೇತನ ಪಡೆದವರು. 1992ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ.  ಪಡೆದಿರುವ ನರಹಳ್ಳಿಯವರು ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. 'ಅನುಸಂಧಾನ', 'ನವ್ಯತೆ', 'ಇಹದ ಪರಿಮಳದ ಹಾದಿ', 'ಸಾಹಿತ್ಯ ಸಂಸ್ಕೃತಿ', “ಕುವೆಂಪು ನಾಟಕಗಳ ಅಧ್ಯಯನ', ...

READ MORE

Related Books