ಅನುರಾಯ ಶಾಲ್ಮಲೆ

Author : ಲಕ್ಷ್ಮೀಶ್ ಹೆಗಡೆ ಸೋಂದಾ

Pages 102

₹ 117.00




Year of Publication: 2022
Published by: ಕದಂಬ ಪ್ರಕಾಶನ
Address: ನಂ.834, 62ನೆ ಅಡ್ಡರಸ್ತೆ, ಕುಮಾರಸ್ವಾಮಿ ಲೇಔಟ್, 1ನೇ ಹಂತ, ಬೆಂಗಳೂರು-78.

Synopsys

ಇತಿಹಾಸಕಾರರಾಗಿ ಚಿರಪರಿಚಿತರಾಗಿರುವ ಮತ್ತು ಸೊಂದಾ ಇತಿಹಾಸ ಕುರಿತು ಆಳವಾದ ಅಧ್ಯಯನ ಮತ್ತು ಸಂಶೋಧನೆಗೆ ಹೆಸರಾಗಿರುವ ಲಕ್ಷ್ಮೀಶ್ ಹೆಗಡೆ ಸೋಂದಾ ಅವರ ಕೃತಿ. ಸೋದೆ ಸದಾಶಿವರಾಯರ ನಿಗೂಢ ಆತ್ಮಕಥನ ಇದಾಗಿದೆ.ಅರಸರ ಆಳ್ವಿಕೆಯ ಕಾಲದಲ್ಲಿ ರಾಜಧಾನಿಯಾಗಿದ್ದ ಸೋದೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಈಗಿನ ಸೋಂದಾ. ಸೋದೆ ಸದಾಶಿವರಾಯ ಅರಸ ಮಾತ್ರವಲ್ಲದೆ ವಿದ್ವಾಂಸನೂ ಆಗಿದ್ದ. ಚರಿತ್ರೆಯ ಪುಟಗಳಲ್ಲಿ ಮರೆಯಾಗಿ ಹೋದವನ ಕಥನವನ್ನು ಈ ಕೃತಿ ತೆರೆದಿಡುತ್ತದೆ. ಕನ್ನಡ, ಸಂಸ್ಕೃತ, ಉರ್ದು, ಮರಾಠಿ ಭಾಷೆಗಳಲ್ಲಿ ಪರಿಣತನಾಗಿದ್ದ ಸದಾಶಿವರಾಯ, ಹದಿನೇಳು ಕೃತಿಗಳನ್ನು ರಚಿಸಿದ್ದ ಎನ್ನುತ್ತಾರೆ ಇತಿಹಾಸಕಾರರು. ಆತನ ಕುರಿತ ಅಪರೂಪದ ವೃತ್ತಾಂತವಾಗಿ ಅನುರಾಯ ಶಾಲ್ಮಲೆ ಗಮನ ಸೆಳೆಯುತ್ತದೆ.

About the Author

ಲಕ್ಷ್ಮೀಶ್ ಹೆಗಡೆ ಸೋಂದಾ
(18 February 1984)

ಲಕ್ಷ್ಮೀಶ್ ಹೆಗಡೆ ಸೋಂದಾ, ಇತಿಹಾಸಕಾರರಾಗಿ, ವಾಗ್ಮಿಗಳಾಗಿ ನಾಡಿನ ಚಿರಪರಿಚಿತ ಹೆಸರು. ಕಳೆದ 15 ವರ್ಷಗಳಿಂದ ಇತಿಹಾಸ ಸಂಶೋಧನೆಯಲ್ಲಿ ಸಕ್ರಿಯರಾಗಿ ಹಲವಾರು ಶಾಸನಗಳು, ವೀರಗಲ್ಲುಗಳು, ಐತಿಹಾಸಿಕ ಕುರುಹುಗಳನ್ನು ಸಂಶೋಧಿಸಿ ಅವುಗಳನ್ನು ಅಭ್ಯಸಿಸಿ ಸಮಾಜಕ್ಕೆ ಪರಿಚಯಿಸಿರುತ್ತಾರೆ. ಇದುವರೆಗೂ 13 ಕೃತಿಗಳು, 400 ಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಸಂಶೋಧನೆಗಾಗಿ 2013 ರಲ್ಲಿ ಬಸವರಾಜ ಕಟ್ಟಿಮನಿ ರಾಜ್ಯ ಪ್ರಶಸ್ತಿ ಮತ್ತು 2016 ರಲ್ಲಿ ಕದಂಬ ಸೇವಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿ ವರ್ಷ ಇವರ ಸಂಚಾಲಕತ್ವದಲ್ಲಿ ನಡೆಯುವ ಸೋಂದಾ ಇತಿಹಾಸೋತ್ಸವ ನಾಡಿನಲ್ಲಿ ಪ್ರಸಿದ್ಧಿ ಪಡೆದಿದೆ. ಯುವ ಜನತೆಯಲ್ಲಿ ಸ್ಥಳೀಯ ಇತಿಹಾಸದ ಕುರಿತು ...

READ MORE

Related Books