ಅನುಸಂಧಾನ- ಪುಸ್ತಕಾವಲೋಕನ ಸಂಕಲನ

Author : ಬರಗೂರು ರಾಮಚಂದ್ರಪ್ಪ

Pages 364

₹ 295.00




Year of Publication: 2013
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 08026617100

Synopsys

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಲೇಖನಗಳ ಸಂಕಲನ “ಅನುಸಂಧಾನ'.  ಇವುಗಳಲ್ಲಿ ಬಹುಪಾಲು ಮುನ್ನುಡಿಗಳು. ಸ್ವತಂತ್ರ ಲೇಖನದ ಸ್ವರೂಪಕ್ಕೆ ಹತ್ತಿರವೆಂದು ಭಾವಿಸಿದ ಮುನ್ನುಡಿಗಳು ಮಾತ್ರ ಇಲ್ಲಿ ಸೇರಿವೆ. ಮುನ್ನುಡಿಗಳಲ್ಲದೆ ವಿವಿಧ ಸಂದರ್ಭದಲ್ಲಿ ವಿವಿಧ ಪುಸ್ತಕಗಳನ್ನು ಕುರಿತು ಅವರು ಬರೆದ ವಿಶ್ಲೇಷಣಾತ್ಮಕ ಬರೆಹಗಳನ್ನು ಈ ಸಂಕಲನದಲ್ಲಿ ಸೇರಿಸಲಾಗಿದೆ. ಇದು 'ಪುಸ್ತಕಾವಲೋಕನ ಸಂಕಲನ'. ಹಾಗೆಂದು ಕೇವಲ 'ಕೃತಿನಿಷ್ಠ' ವಿಮರ್ಶೆಯಲ್ಲ. ಪುಸ್ತಕಾವಲೋಕನದ ಒಳತಿರುಳಾಗಿ ತಾತ್ವಿಕತೆಯ ಚಲನೆಯೊಂದು ಜೀವಂತವಾಗಿದೆ.

About the Author

ಬರಗೂರು ರಾಮಚಂದ್ರಪ್ಪ
(18 October 1946)

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...

READ MORE

Related Books