ಅಪರೂಪದ ಪುರಾಣ ಕಥೆಗಳು

Author : ಆಶಾ ರಘು

Pages 120

₹ 120.00




Year of Publication: 2020
Published by: ಸಾಹಿತ್ಯ ಲೋಕ ಪಬ್ಲಿಕೇಷನ್ಸ್‌
Address: #745, 12ನೇ ಮುಖ್ಯರಸ್ತೆ,3ನೇ ಬ್ಲಾಕ್‌, ರಾಜಾಜಿನಗರ, ಬೆಂಗಳೂರು
Phone: 9945939436

Synopsys

ಅಜ್ಜಿ ಅಜ್ಜಂದಿರು ಮೊಮ್ಮಕ್ಕಳನ್ನು ಕೂರಿಸಿಕೊಂಡು ಕಥೆ ಹೇಳುತ್ತಿದ್ದ ಕಾಲವೊಂದಿತ್ತು. ಒಂದೂರಲ್ಲಿ ಒಬ್ಬ ರಾಜಕುಮಾರಿ ಇದ್ದಳು ಎನ್ನುತ್ತಾ ಆರಂಭವಾಗುತ್ತಿದ್ದ ಕಾಲ್ಪನಿಕ ಕಥೆಯಲ್ಲಿ ತಂತ್ರಜ್ಞಾನಕ್ಕೂ ಮೀರಿದ ಕಥಾವಸ್ತುಗಳು ಬಂದೊಗುತ್ತಿದ್ದವು. ಇಂತಹ ಕಾಲ್ಪನಿಕ, ಪೌರಾಣಿಕ, ಜಾನಪದ ಕಥೆಗಳಲ್ಲಿ ನೀತಿ ಪಾಠವೂ ಇರುತ್ತಿತ್ತು. ಆದರೆ ಇಂದಿನ ಮಕ್ಕಳಿಗೆ ಇವೆಲ್ಲಾ ದಕ್ಕುತ್ತಿರುವುದು ಸಂದೇಹವೇ ಸರಿ. ಗ್ಯಾಜೆಟ್‌ ಲೋಕದಲ್ಲಿ ಮುಳುಗಿರುವ ಮಕ್ಕಳಿಗೆ ಕಥೆ ಹೇಳುವ ಪುರುಸೊತ್ತು ಮನೆಯ ಸದಸ್ಯರಿಗೆ ಇರುವುದಿಲ್ಲ. ಮಕ್ಕಳೂ ಕೂಡ ತಂತ್ರಜ್ಞಾನದ ತ್ವರಿತ ಬೆಳವಣಿಗೆಗೆ ತಕ್ಕಂತೆ ಇಂತಹ ನೀತಿ ಪಾಠಗಳನ್ನು ಯೂಟ್ಯೂಬ್‌, ಗೂಗಲ್‌ನಲ್ಲಿ ನೋಡಲು ಶುರುವಿಟ್ಟುಕೊಂಡಿರುತ್ತಾರೆ. 

ಲೇಖಕಿ ಆಶಾ ರಘು ಅವರು ಇಂದಿನ ಸಿದ್ಧ ಮಾದರಿಯನ್ನು ಒಡೆಯಲು ಅಪರೂಪದ ಪುರಾಣದ ಕಥೆಗಳನ್ನು ಹೆಣೆದಿದ್ದಾರೆ. ಇವು ಪೌರಾಣಿಕ ಕಥೆಗಳೆ ಆಗಿದ್ದರೂ ಕಥಾ ವಸ್ತು ಹಾಗೂ ಹೆಣೆದಿರುವ ರೀತಿ ವಿಭಿನ್ನವಾಗಿದೆ. ರಾಮ-ಸೀತೆಯ ರಾಮಾಯಣದಲ್ಲಿ ಚೂಡಾಮಣಿಯ ಮೂಲಕ ಅವರಿಬ್ಬರ ಪ್ರೀತಿ ಕಟ್ಟಿಕೊಟ್ಟಿರುವುದು, ಅರ್ಧನಾರೀಶ್ವರ ಪರಿಕಲ್ಪನೆ ಇವೆಲ್ಲವೂ ಓದುಗರಿಗೆ ಹೊಸತನವನ್ನು ಮೂಡಿಸುತ್ತವೆ. 

About the Author

ಆಶಾ ರಘು
(18 June 1979)

ಆಶಾ ರಘು ಅವರು ಕನ್ನಡದ ಪ್ರಮುಖ ಕಾದಂಬರಿಗಾರ್ತಿಯರಲ್ಲಿ ಒಬ್ಬರು. ಇವರು ಕೇಶವ ಅಯ್ಯಂಗಾರ್ ಹಾಗೂ ಸುಲೋಚನ ದಂಪತಿಗಳ ಹಿರಿಯ ಮಗಳಾಗಿ 1979ರ ಜೂನ್ 18 ನೇ ತಾರೀಖಿನಂದು ಬೆಂಗಳೂರಿನಲ್ಲಿ ಹುಟ್ಟಿದರು. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 'ಆವರ್ತ', 'ಗತ', 'ಮಾಯೆ', 'ಚಿತ್ತರಂಗ' ಮೊದಲಾದ ಕಾದಂಬರಿಗಳನ್ನೂ, 'ಆರನೇ ಬೆರಳು', 'ಬೊಗಸೆಯಲ್ಲಿ ಕಥೆಗಳು', 'ಅಪರೂಪದ ಪುರಾಣ ಕಥೆಗಳು' ಮೊದಲಾದ ಕಥಾಸಂಕಲನಗಳನ್ನೂ, 'ಚೂಡಾಮಣಿ', 'ಕ್ಷಮಾದಾನ', 'ಬಂಗಾರದ ...

READ MORE

Related Books