ಅರ್ಪಣ ದೃಷ್ಟಿ

Author : ವಿ.ಕೃ. ಗೋಕಾಕ (ವಿನಾಯಕ)

Pages 68




Year of Publication: 1973
Published by: ಸುರುಚಿ ಪ್ರಕಾಶನ,
Address: ಮೈಸೂರು

Synopsys

ವಿ.ಕೃ. ಗೋಕಾಕ್ ಅವರ ಕೃತಿ-ಅರ್ಪಣ ದೃಷ್ಟಿ. ಅವರು ಷಷ್ಟ್ಯಬ್ಧಿ ಪೂರ್ಣಗೊಳಿಸಿ 61ನೇ ವಯಸ್ಸಿಗೆ ಪದಾರ್ಪಣೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾಡಿದ ಭಾಷಣವನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಧಾರವಾಡದಲ್ಲೂ ನಡೆದ ಇಂತದ್ದೇ ಸಮಾರಂಭದ ಭಾಷಣವನ್ನೂ ಸಹ ಟಿಪ್ಪಣಿಯಾಗಿ ಸೇರಿಸಲಾಗಿದೆ. ಈ ವಿಚಾರಗಳನ್ನು ‘ಒಂದು ಕಾಲಾವಧಿಯ ಸಾರ ಸಂಗ್ರಹ’ ಎಂದು ಗೋಕಾಕರು ವರ್ಣಿಸಿದ್ದಾರೆ.  

 

About the Author

ವಿ.ಕೃ. ಗೋಕಾಕ (ವಿನಾಯಕ)
(09 August 1909 - 28 April 1992)

‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕ್ ಅವರು ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯದಲ್ಲಿ ದೊಡ್ಡ ಹೆಸರು. ಕರ್ನಾಟಕದಿಂದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಮೊದಲ ವ್ಯಕ್ತಿ ಗೋಕಾಕ್ ಅವರು. ಭಾರತದಲ್ಲಿಯೇ ಅತ್ಯಂತ ಪ್ರತಿಷ್ಠಿತ ಲೇಖಕ-ಸಾಹಿತಿ ಅವರಾಗಿದ್ದರು. ಧಾರವಾಡ ಜಿಲ್ಲೆಯ (ಈಗಿನ ಹಾವೇರಿ) ಸವಣೂರಿನಲ್ಲಿ 1909ರ ಆಗಸ್ಟ್ 9ರಂದು ಜನಿಸಿದರು. ತಂದೆ ಕೃಷ್ಣರಾಯ ತಾಯಿ ಸುಂದರಮ್ಮ. ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ಪುಣೆಯ ಫರ್ಗ್ಯೂಸನ್  ಕಾಲೇಜಿನಲ್ಲಿ ಅನಂತರ ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಉನ್ನತ ...

READ MORE

Related Books