ಆರ್ಯಭಟ

Author : ಜಿ. ಜ್ಞಾನಾನಂದ

Pages 102

₹ 15.00




Year of Publication: 1980
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019

Synopsys

`ಆರ್ಯಭಟ' ಜೀವನ ಚರಿತ್ರೆಯ ಪುಸ್ತಕವಿದು. ಲೇಖಕ ಜಿ. ಜ್ಞಾನಾನಂದ ಅವರು ರಚಿಸಿದ್ದಾರೆ. ಈಗ ತಿಳಿದಿರುವಂತೆ, ಆರ್ಯಭಟನು, ಭಾರತದ ಪ್ರಥಮ ಗಣಿತಾಚಾರ್ಯ ಹಾಗೂ ಖಗೋಳ ವಿಜ್ಞಾನಿ  ಪ್ರಾಯಶಃ ಕ್ರಿಸ್ತಶಕ ಐದನೆಯ ಶತಮಾನದವರು. ಅವನ ಲೆಕ್ಕಾಚಾರಗಳ ನಿಖರತೆ, ವಿಚಾರ ರೀತಿ ಎಲ್ಲ ಬೆರಗುಗೊಳಿಸುವಂತಹವು ಎಂದು ಆರ್ಯಭಟರ ಕುರಿತು ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಪುಸ್ತಕದಲ್ಲಿ , ಖಗೋಳಶಾಸ್ತ್ರದ ಲೆಕ್ಕಾಚಾರಕ್ಕೆ ಅಗತ್ಯವಾದ ಗಣಿತದಲ್ಲಿ ಅವರ ಪಾತ್ರ, ಆರ್ಯಭಟ-ಸಿದ್ಧಾ೦ತ ಕೃತಿಯ ರಚನೆಯ ಹಿನ್ನಲೆ, ಗಣಿತದ ಕಡೆಗೆ ಆರ್ಯಭಟ ಒಲವು ತಳೆದ ಕುರಿತಾಗಿ ಈ ಪುಸ್ತಕದಲ್ಲಿ ಸರಳ ಕನ್ನಡದಲ್ಲಿ ಲೇಖಕರು ವರ್ಣಿಸಿದ್ದಾರೆ.

About the Author

ಜಿ. ಜ್ಞಾನಾನಂದ
(05 July 1940)

ಲೇಖಕ ಜ್ಞಾನಾನಂದರು ಮೂಲತಃ ಚಿಕ್ಕಬಳ್ಳಾಪುರದ ನಂದಿ ಗ್ರಾಮದವರು. ತಂದೆ- ಎಂ.ಆರ್. ಜಿ. ಶಂಕರ್, ತಾಯಿ ಈಶ್ವರಮ್ಮ. ಪ್ರಾಥಮಿಕ ಶಿಕ್ಷಣವನ್ನು ಚಿಕ್ಕಬಳ್ಳಾಪುರದಲ್ಲಿ ಪಡೆದ ಜ್ಞಾನಾನಂದರು ಆನಂತರ ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್ಸಿ ಪದವಿ ಪಡೆದು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಮತ್ತು ಹಂಪಿಯ ಕನ್ನಡ ವಿಶ್ವವಿದ್ಯಾಲಯಕ್ಕೆ ‘ಕನ್ನಡ ಮಹಾಭಾರತಗಳಲ್ಲಿ ಶಿಲ್ಪ ಮತ್ತು ಶಿಲ್ಪಿ’ ಎಂಬ ಮಹಾಪ್ರಬಂಧ ಮಂಡಿಸಿ, ಪಿ.ಎಚ್‌.ಡಿ. ಪಡೆದರು. ಚೆನ್ನೈನ ದಕ್ಷಿಣ ಭಾರತ ಹಿಂದಿಸಭಾದಿಂದ ರಾಷ್ಟ್ರಭಾಷಾ ಪ್ರವೀಣ್‌, ಇಂಡಿಯನ್‌ ಸ್ಟ್ಯಾಟಿಸ್ಟಿಕಲ್‌ ಇನ್‌ಸ್ಟಿಟ್ಯೂಟ್‌ನಿಂದ ಸ್ನಾತಕೋತ್ತರ ಸರ್ಟಿಫಿಕೇಟ್‌ (ಸ್ಟ್ಯಾಟಿಸ್ಟಿಕಲ್‌ ಅಪ್ಲೈಡ್‌ ಟು ಇಂಡಸ್ಟ್ರಿ), ಸೂಪರ್‌ವೈಸರಿ ಡೆವಲಪ್‌ಮೆಂಟ್‌ ಡಿಪ್ಲೊಮ ಮತ್ತು ಡಿಪ್ಲೊಮ ...

READ MORE

Related Books