ಅಸಮರ್ಥನ ಜೀವನಯಾತ್ರೆ

Author : ಬಿ. ಸುಜ್ಞಾನಮೂರ್ತಿ

Pages 184

₹ 100.00




Year of Publication: 2016
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ತೆಲುಗಿನ ಜನಪ್ರಿಯ ಲೇಖಕ ತ್ರಿಪುರನೇನಿ ಗೋಪಿಚಂದ ಅವರ ’ಅಸಮರ್‍ತುನಿ ಜೀವನ ಯಾತ್ರಾ’ ಕಾದಂಬರಿಯ ಕನ್ನಡ ಅನುವಾದ. ತೆಲುಗಿನ ಮೊದಲ ಮನೋವಿಶ್ಲೇಷಣಾತ್ಮಕ ಕಾದಂಬರಿ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಕಾದಂಬರಿಯನ್ನು ಬಿ. ಸುಜ್ಞಾನಮೂರ್ತಿ ಅವರು ಕನ್ನಡೀಕರಿಸಿದ್ದಾರೆ. ಈ ಕಾದಂಬರಿಯಲ್ಲಿ ಗೋಪಿಚಂದ ಅವರು ಅನನ್ಯ ಪ್ರತಿನಾಯಕನ ಪಾತ್ರ ಸೃಷ್ಟಿಸಿದ್ದಾರೆ. ಪ್ರಕಟವಾದ ಏಳು ದಶಕಗಳ ನಂತರವೂ ಈ ಕಾದಂಬರಿಯು ತೆಲುಗಿನಲ್ಲಿ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ.

About the Author

ಬಿ. ಸುಜ್ಞಾನಮೂರ್ತಿ
(06 July 1960)

ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...

READ MORE

Related Books