ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ

Author : ಕುವೆಂಪು (ಕೆ.ವಿ. ಪುಟ್ಟಪ್ಪ)

Pages 49

₹ 65.00




Year of Publication: 2014
Published by: ಉದಯರವಿ ಪ್ರಕಾಶನ
Address: 1354/1 ಕೃಷ್ಣಮೂರ್ತಿಪುರಂ, ಮೈಸೂರು 570004
Phone: 0821 2332971

Synopsys

ರಾಷ್ಟ್ರಕವಿ ಕುವೆಂಪು ಅವರ ಭಾಷಣ ಸಂಕಲನ. ಈ ಸಂಕಲನದಲ್ಲಿ ನಾಲ್ಕು ಭಾಷಣಗಳಿವೆ. ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ,  ಮಲೆನಾಡಿನ ಯುವಕರಲ್ಲಿ ವಿದ್ಯಾರ್ಥಿಗಳಲ್ಲಿ ಗೌರವದ ಆವಶ್ಯಕತೆ, ವಿದ್ಯಾರ್ಥಿಗಳಿಗೇಕೆ ಆತ್ಮಶ್ರೀ ? ಎಂಬ ಭಾಷಣಗಳಿವೆ. ಈ ಸಂಕಲನವು ಮೊದಲಿಗೆ 1947ರಲ್ಲಿ ಪ್ರಕಟವಾಗಿತ್ತು.

About the Author

ಕುವೆಂಪು (ಕೆ.ವಿ. ಪುಟ್ಟಪ್ಪ)
(29 December 1904 - 11 November 1994)

ಕುವೆಂಪು ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡಿದ ಕವಿ, ಪ್ರಖರ ವಿಚಾರವಾದಿ-ಚಿಂತಕ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡ ಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು. ತಂದೆ ವೆಂಕಟಪ್ಪಗೌಡ ತಾಯಿ ಸೀತಮ್ಮ. ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯವರಾದ ಪುಟ್ಟಪ್ಪ ಜನಿಸಿದ್ದು ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆಯಲ್ಲಿ 1904ರ ಡಿಸೆಂಬರ್ 29ರಂದು. ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ ಎಂ.ಎ. ಪದವಿ (1929) ಪಡೆದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕ (1929) ಆಗಿ ಅನಂತರ ಕ್ರಮೇಣ ಉಪಪ್ರಾಧ್ಯಾಪಕ, ...

READ MORE

Related Books