ಆವಾಹನೆ

Author : ಯು.ಆರ್. ಅನಂತಮೂರ್ತಿ

Pages 46

₹ 90.00




Year of Publication: 1987
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417

Synopsys

ಜ್ಞಾನಪೀಠ ಪುರಸ್ಕೃತ ಲೇಖಕ ಡಾ. ಯು. ಆರ್‌. ಅನಂತಮೂರ್ತಿ ಅವರ ರಂಗ ಪ್ರಯತ್ನ ’ಆವಾಹನೆ’.  ನಾಟಕಕಾರರಾಗಿ ಅಷ್ಟೇನೂ ಜನಪ್ರಿಯತೆ ಪಡೆಯದಿದ್ದರೂ ಅವರ ಆಸಕ್ತಿ ನಾಟಕ ಸಾಹಿತ್ಯವೂ ಆಗಿತ್ತು ಎಂಬುದಕ್ಕೆ ಈ ಗ್ರಂಥ ಸಾಕ್ಷಿ. 

ಶ್ರೀನಿವಾಸ ಎಂಬ ಕಾಲ್ಪನಿಕ ವ್ಯಕ್ತಿಯ ಸುತ್ತ ನಾಟಕ ಹೆಣೆದುಕೊಂಡಿದೆ. ಭವ- ವಿಭವದ ನಡುವಿನ ತೊಳಲಾಟ ಕೃತಿಯಲ್ಲಿ ಹಾಸುಹೊಕ್ಕಾಗಿದೆ. 

 

About the Author

ಯು.ಆರ್. ಅನಂತಮೂರ್ತಿ
(21 December 1932 - 22 August 2014)

ಕಥೆ-ಕಾದಂಬರಿ ಮತ್ತು ವೈಚಾರಿಕ ಚಿಂತನೆಗಳ ಮೂಲಕ ಕನ್ನಡ- ಭಾರತದ ಸಾಹಿತ್ಯ-ಸಾಂಸ್ಕೃತಿಕ ಚಿಂತನೆಯನ್ನು ಶ್ರೀಮಂತಗೊಳಿಸಿದವರು ಯು.ಆರ್. ಅನಂತಮೂರ್ತಿ. ತಂದೆ ಉಡುಪಿ ರಾಜಗೋಪಾಲಾಚಾರ್ಯ ತಾಯಿ ಸತ್ಯಮ್ಮ. ತೀರ್ಥಹಳ್ಳಿಯ ಮೇಳಿಗೆಯಲ್ಲಿ 1932ರ ಡಿಸೆಂಬರ್ 21 ಜನಿಸಿದರು. ದೂರ್ವಾಸಪುರದಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಸಂಸ್ಕೃತ ಕಲಿತು ಶಾಲಾ ಶಿಕ್ಷಣವನ್ನು ತೀರ್ಥಹಳ್ಳಿಯಲ್ಲಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ (1966) ಪದವಿ ಪಡೆದರು. ಹಾಸನದ ಕಾಲೇಜಿನಲ್ಲಿ ಅಧ್ಯಾಪಕ (1956) ರಾದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಂತರ ಕೇರಳದ ಮಹಾತ್ಮಗಾಂಧಿ ವಿಶ್ವವಿದ್ಯಾಲಯದ ಕುಲಪತಿ (1987-91) ಗಳಾಗಿ ...

READ MORE

Related Books