ಅವಳ ಕತೆ

Author : ದೇವುಡು ನರಸಿಂಹಶಾಸ್ತ್ರಿಗಳು

Pages 185

₹ 1.00




Year of Publication: 1950
Published by: ವಾಹಿನಿ ಪ್ರಕಾಶನ
Address: ಜಯಚಾಮರಾಜ ರಸ್ತೆ, ಬೆಂಗಳೂರು

Synopsys

ದೇವುಡು ನರಸಿಂಹಶಾಸ್ತ್ರಿಗಳು ಬರೆದ ಕಾದಂಬರಿ-ಅವಳ ಕತೆ. ವಿಜಯನಗರದ ಶ್ರೀ ಕೃಷ್ಣ ದೇವರಾಯ ನಂತರ ರಾಮರಾಯ ಎಂಬುವರು ರಾಜ್ಯಭಾರ ನಡೆಸುತ್ತಿದ್ದಂತೆ, ಆತನೇ ವಿಜಯನಗರದ ಕೊನೆಯ ಸಾಮ್ರಾಟನೂ ಆಗುತ್ತಾನೆ. ವಿಜಯನಗರ ಆಡಳಿತ ಕಾಲದಲ್ಲಿ ಸಂಗೀತಕ್ಕೆ ಹೆಚ್ಚು ಪ್ರಾಧಾನ್ಯತೆ ಇದ್ದು, ರಾಜಾಶ್ರವೂ ಇತ್ತು. ಇಂತಹ ಅಂಶಗಳೊಂದಿಗೆ ಸಾಗುವ ಕಾದಂಬರಿಯು ಸಮೃದ್ಧ ಇತಿಹಾಸವೊಂದರ ನಗರದ ವಿನಾಶವೂ ಜೊತೆಜೊತೆಯಾಗೇ ಚಿತ್ರಿಸುತ್ತಾ ಹೋಗುತ್ತದೆ. ಹೀಗಾಗಿ, ಕಾದಂಬರಿಯು ಓದುಗನನ್ನು ಆವರಿಸಿಕೊಳ್ಳುತ್ತದೆ.

About the Author

ದೇವುಡು ನರಸಿಂಹಶಾಸ್ತ್ರಿಗಳು
(29 December 1886 - 27 October 1962)

’ಮಹಾಕಾದಂಬರಿಕಾರ’ ಎಂದು ಹೆಸರುವಾಸಿಯಾಗಿದ್ದ ದೇವುಡು ನರಸಿಂಹಶಾಸ್ತ್ರಿಗಳು ಶಿಕ್ಷಕರಾಗಿ, ಸಂಪಾದಕರಾಗಿ, ನಟರಾಗಿ, ವಿಮರ್ಶಕರಾಗಿ ತಮ್ಮ ಪ್ರತಿಭೆ- ಪಾಂಡಿತ್ಯ ಮೆರೆದಿದ್ದರು. ನರಸಿಂಹ ಶಾಸ್ತ್ರಿಗಳು ಜನಿಸಿದ್ದು ಮೈಸೂರಿನ ರಾಜಪುರೋಹಿತರ ಮನೆತನದಲ್ಲಿ.  1896ರ ಡಿಸೆಂಬರ್‌ 26ರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡರು. ತಾಯಿಯ ಆಸರೆಯಲ್ಲಿ ಬೆಳೆದ ನರಸಿಂಹಶಾಸ್ತ್ರಿಗಳು ತೀಕ್ಷ್ಣ ಬುದ್ಧಿಯುಳ್ಳವರಾಗಿದ್ದರು. ಹನ್ನೆರಡನೆಯ ವಯಸ್ಸಿನಲ್ಲಿಯೇ ರಾಮಾಯಣ, ಮಹಾಭಾರತದಂತಹ ಕಾವ್ಯ ಮತ್ತುಭಾಗವತದಂತಹ ಪುರಾಣಗಳನ್ನು ಓದಿ ಅರಿತಿದ್ದರು. ಹದಿನೈದನೆಯ ವಯಸ್ಸಿನಲ್ಲಿಯೇ ಛಂದೋಬದ್ಧವಾಗಿ ಕಾವ್ಯ ರಚಿಸುವ ಹವ್ಯಾಸ ಬೆಳೆಸಿಕೊಂಡರು. ಸಾಂಪ್ರದಾಯಿಕ ವೈದಿಕ ವಿದ್ಯೆಯ ಜೊತೆಯಲ್ಲಿಯೇ ಬಿ.ಎ., ಎಂ.ಎ. ಪದವಿಯನ್ನು ಸಂಸ್ಕೃತ ಹಾಗೂ ಭಾರತೀಯ ತತ್ವಶಾಸ್ತ್ರದಲ್ಲಿ ಪಡೆದಿದ್ದರು. ಸರ್ವಪಲ್ಲಿ ...

READ MORE

Related Books