ತ್ರಿವೇಣಿ ಅವರು ಬರೆದ ಕಾದಂಬರಿ-ಅವಳ ಮಗಳು. ಈ ಕಾದಂಬರಿ ಬರೆಯುವಾಗ ತ್ರಿವೇಣಿ ತೀರಿಕೊಂಡರು. ಎಂ.ಸಿ.ಪದ್ಮಾ ಅವರು ಅದನ್ನು ಪೂರ್ಣಗೊಳಿಸಿದ್ದಾರೆ. ಈ ಕಾದಂಬರಿ ಆಧರಿಸಿ ನಟ ಶ್ರೀನಿವಾಸ ಮೂರ್ತಿ ಅವರು ಈ -ಟೀವಿಗಾಗಿ ಧಾರಾವಾಹಿ ಸರಣಿ ಮಾಡಿದ್ದಾರೆ.
ಮನಸ್ಸಿನ ಕ್ರಿಯೆಗಳಿಗೆ ಕಥಾರೂಪ ನೀಡಿ ಕಾದಂಬರಿಗಳನ್ನು ರಚಿಸಿದ್ದು ತ್ರಿವೇಣಿ ಅವರ ಹೆಗ್ಗಳಿಕೆ. ಇವರು 1928 ರ ಸೆಪ್ಟಂಬರ್ 1 ರಂದು ಮೈಸೂರಿನಲ್ಲಿ ಜನಿಸಿದರು. ಮನಸ್ಸಿನ ಭಾವನೆಗಳನ್ನೂ ಚಿತ್ರಿಸಿ ಬರೆದ ಇವರು ರಚಿಸಿದ ಪ್ರಮುಖ ಕಾದಂಬರಿಗಳೆಂದರೆ- ಹೂವು ಹಣ್ಣು, ಅಪಸ್ವರ, ಅಪಜಯ, ಸೋತುಗೆದ್ದವಳು, ಬೆಕ್ಕಿನಕಣ್ಣು, ಶರಪಂಜರ, ದೂರದ ಬೆಟ್ಟ, ಅಪಜಯ, ಕಂಕಣ, ಮುಚ್ಚಿದ ಬಾಗಿಲು, ಬಾನು ಬೆಳಗಿತು, ಅವಳ ಮನೆ, ವಸಂತಗಾನದಿಂದ ಹಿಡಿದು ಬೆಳ್ಳಿಮೋಡದವರೆಗೆ ಸುಮಾರು 20 ಕಾದಂಬರಿಗಳನ್ನು ಹಾಗೂ 3 ಕತಾ ಸಂಕಲನಗಳನ್ನು ರಚಿಸಿದ್ದಾರೆ. ಇವರ ಬೆಳ್ಳಿಮೋಡ, ಶರಪಂಜರ, ಹಣ್ಣಲೆ ಚಿಗುರಿದಾಗ ಕಾದಂಬರಿಗಳು ಚಲನಚಿತ್ರವಾಗಿಯೂ ಅಪಾರ ಜನಮನ್ನಣೆ ಗಳಿಸಿವೆ. ಇವರಿಗೆ ಕರ್ನಾಟಕ ರಾಜ್ಯಪ್ರಶಸ್ತಿ – 'ಅವಳ ಮನೆ' ...
READ MORE