ಅವಿರತ

Author : ಶ್ರೀಧರ ಹೆಗಡೆ ಭದ್ರನ್‍

Pages 180

₹ 100.00




Year of Publication: 2011
Published by: ಅಭಿನವ ಪ್ರಕಾಶನ
Address: ಅಭಿನವ, 17/18-3, ಮೊದಲನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-40
Phone: 9448804905

Synopsys

ಲೇಖಕರು, ವಿಮರ್ಶಕರೂ ಆದ ಶ್ರೀಧರ ಹೆಗಡೆ ಭದ್ರನ್ ಅವರ ಐದನೇ ಕೃತಿ ’ ಅವಿರತ’. 

ಕನ್ನಡ ವಿಶ್ವವಿದ್ಯಾಲಯ, ಆಕಾಶವಾಣಿ, ಸಾಹಿತ್ಯ ಅಕಾಡೆಮಿ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಲೇಖಕರು  ಮಂಡಿಸಿದ ಪ್ರಬಂಧಗಳು ಹಾಗೂ ಪ್ರಕಟಿತ ಬರಹಗಳು ಅವಿರತದ ಮೂಲಕ ರೂಪುಪಡೆದುಕೊಂಡಿವೆ.

ಕನ್ನಡ  ಸಾಹಿತ್ಯದ ಅವಿರತ ಗಂಭೀರ ವಿದ್ಯಾರ್ಥಿಯಾದ ಶ್ರೀಧರ ಅವರು ಅವಿರತ ಎಂಬ ಈ ಕೃತಿಯಲ್ಲಿ ದಾಸ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಕನಕ-ಪುರಂದರರ ಕೀರ್ತನೆ, ರತ್ನಾಕರ ವರ್ಣಿಯ ಭರತೇಶ ವೈಭವದ ಅಧ್ಯಯನ ಪರಂಪರೆಯ ಆಳವಾದ ಶೋಧ ನಡೆಸಿದ್ದಾರೆ. ಇವುಗಳಲ್ಲಿ ಅನುಭಾವ, ಆಧ್ಯಾತ್ಮ ಹಾಗೂ ಸಾಂಸ್ಕೃತಿಕ ನೆಲೆಗಳ ಪರಿಣಾಮಕಾರಿ ವಿಶ್ಲೇಷಣೆಗಳಿವೆ.

About the Author

ಶ್ರೀಧರ ಹೆಗಡೆ ಭದ್ರನ್‍
(01 November 1977)

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರಿನಲ್ಲಿ ಜನನ. ಮೂರೂರು. ಕುಮಟಾ, ಧಾರವಾಡಗಳಲ್ಲಿ ವಿದ್ಯಾಭ್ಯಾಸ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪ್ರಥಮ ರಾಂಕ್‌ನಲ್ಲಿ ಬಂಗಾರದ ಪದಕಗಳೊಂದಿಗೆ ಕನ್ನಡ ಎಂ.ಎ., ಪ್ರಶಸ್ತಿ ಸಹಿತ ಪ್ರಥಮ ವರ್ಗದಲ್ಲಿ ಪ್ರಾಚ್ಯಲೇಖನ ಅಧ್ಯಯನ, ಬಸವ ಅಧ್ಯಯನ, ಟ್ರಾನ್ಸ್‌ಲೇಷನ್, ಜೈನಶಾಸ್ತ್ರಗಳಲ್ಲಿ ಸ್ನಾತಕೋತ್ತರ ಡಿಪ್ಲೊಮಾ. ಆಧುನಿಕ ಕನ್ನಡ ಮಾಹಾಕಾವ್ಯಗಳು-ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿ. ಹೊನ್ನಾವರದ ಎಸ್.ಡಿ.ಎಂ. ಪದವಿ ಕಾಲೇಜು, ಧಾರವಾಡದ ಜೆ.ಎಸ್.ಎಸ್.ಶಿಕ್ಷಣ ಸಂಸ್ಥೆಗಳಲ್ಲಿ, ಕರ್ನಾಟಕ ವಿಶ್ವವಿದ್ಯಾಲಯದ ಜೈನಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಕನಕ ಅಧ್ಯಯನ ಪೀಠಗಳಲ್ಲಿ ಉಪನ್ಯಾಸಕನಾಗಿ ಸೇವೆ ಸಲ್ಲಿಸಿದ್ದಾರೆ. ಆಕಾಶವಾಣಿಯಲ್ಲಿ ಹಂಗಾಮಿ ವಾರ್ತಾವಾಚಕ, ಪ್ರಸ್ತುತ ಧಾರವಾಡ ತಾಲೂಕಿನ ನಿಗದಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ...

READ MORE

Related Books