ಅಕ್ಸಾಯ್ ಚಿನ್

Author : ಯಡೂರ ಮಹಾಬಲ

Pages 428

₹ 400.00




Year of Publication: 2019
Published by: ಚಿಂತನ ಚಿಲುಮೆ ಪ್ರಕಾಶನ
Address: ಗಣೇಶ ದೇವಸ್ಥಾನ ಹಿಂಭಾಗ, 4ನೇ ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಚಾಮರಾಜಪೇಟೆ, ಬೆಂಗಳೂರು-560018
Phone: 9986829657

Synopsys

ಚೈನಾ ಮತ್ತು ಭಾರತದ ನಡುವಿನ ಪಶ್ಚಿಮ ಮತ್ತು ಮಧ್ಯಮ ಕ್ಷೇತ್ರಗಳ ಗಡಿವಿವಾದಗಳ ಕುರಿತು ಲೇಖಕ ಯಡೂರ ಮಹಾಬಲ ಆಳವಾದ ಅಧ್ಯಯನ ಮಾಡಿದ್ದಾರೆ. ಭಾರತ-ಚೀನಾ ಗಡಿ ವಿವಾದದ ಬಗ್ಗೆ ಸುದೀರ್ಘವಾಗಿ ಅರಿತು ಇಲ್ಲಿ ವಿವರಿಸಿದ್ದಾರೆ. ಅದರ ಕುರಿತಾಗಿಯೇ “ಅವಿಸ್ಮರಣೀಯ ಅರುಣಾಚಲ” ಮತ್ತು “ನಿಗೂಢ ಟಿಬೇಟ್” ಎಂಬ ಎರಡು ಪುಸ್ತಕಗಳನ್ನು ಬರೆದಿದ್ದು ಪ್ರಸ್ತುತ ಕೃತಿ ಆ ಸರಣಿಯ ಮೂರನೆಯ ಪುಸ್ತಕವಾಗಿದೆ. ವಿವಾದದ ಭೂಪಟಗಳು ಮತ್ತು ದಾಖಲೆಗಳನ್ನು ಒದಗಿಸುವ ಮೂಲಕ ಲೇಖಕರು ಭಾರತ-ಚೀನಾ ಗಡಿವಿವಾದವನ್ನು ಶಾಸ್ತ್ರೀಯವಾಗಿ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ.

About the Author

ಯಡೂರ ಮಹಾಬಲ
(11 June 1954)

ಯಡೂರ ಮಹಾಬಲ ಅವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಗ್ರಾಮದವರು.ಭಾರತ ವಿದ್ಯಾರ್ಥಿ ಫೆಡರೇಶನ್, ಸಮುದಾಯ ಸಾಂಸ್ಕೃತಿಕ ಸಂಘಟನೆ, ನೌಕರ ಮತ್ತು ಕಾರ್ಮಿಕರ ಹೋರಾಟ ಸಂಘಟನೆಗಳಲ್ಲಿ ಭಾಗಿಯಾಗಿದ್ದರು.  ಹುಬ್ಬಳ್ಳಿಯಲ್ಲಿ ಗೆಳೆಯರೊಂದಿಗೆ ಸಮತಾ ಪ್ರಕಾಶನ ಕಾರ್ಯದಲ್ಲಿ ತೊಡಗಿ ಅನೇಕ ಕಿರುಹೊತ್ತಿಗೆಗಳನ್ನು ಹೊರತಂದಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿ 2014 ರಲ್ಲಿ ನಿವೃತ್ತಿಹೊಂದಿದ್ದಾರೆ.  ‘ಲೋಹಿಯಾ ವಿಚಾರಗಳ ಒಂದು ವಿಮರ್ಶೆ’, ‘ಕ್ವಿಟ್ ಇಂಡಿಯಾ ಚಳವಳಿಯ ಒಳಗುಟ್ಟುಗಳು’, ‘ದೋಕ್ಲಾಂ ಕರ್ಮಕಾಂಡ’, ‘ಅವಿಸ್ಮರಣೀಯ ಅರುಣಾಚಲ, ಅದರ ಚಿತ್ರ ವಿಚಿತ್ರ ಇತಿಹಾಸ’, ನಿಗೂಢ ಟಿಬೇಟ್, ಅಕ್ಸಾಯ್ ಚಿನ್ ವಿವಾದದ ಇತಿಹಾಸ, ‘ಯುದ್ಧಪೂರ್ವ ಕಾಂಡ’ ‘1962 ಯುದ್ಧ ಕಾಂಡ' ಕೃತಿಗಳನ್ನು ...

READ MORE

Related Books