ಬಿ.ವಿ. ಕಾರಂತ

Author : ಜಯಪ್ರಕಾಶ ಮಾವಿನಕುಳಿ

Pages 56

₹ 45.00




Year of Publication: 2017
Published by: ಕನ್ನಡ ಸಂಘ, ಕಾಂತಾವರ
Address: ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನ, ಕಾಂತಾವರ, ಅಂಚೆ-ಕಾಂತಾವರ-574129, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ
Phone: 8548933733

Synopsys

ಕಾಂತಾವರ ಕನ್ನಡ ಸಂಘದ 'ನಾಡಿಗೆ ನಮಸ್ಕಾರ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯ 213ನೇ ಪುಸ್ತಕ ಬಿ.ವಿ. ಕಾರಂತ. ರಂಗಸಾಗರ ಬಿ.ವಿ. ಕಾರಂತ ದೇಶದ ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ರಂಗಭೂಮಿಯ ಭೀಷ್ಮ. ಬಿ. (ಬಾಬುಕೋಡಿ) ವಿ.(ವೆಂಕಟರಮಣ) ಕಾರಂತರು (1928-2002) ದಕ್ಷಿಣ ಕನ್ನಡದವರು. ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಅದ್ಭುತವೆನ್ನಬಹುದಾದ ಚಲನಚಿತ್ರಗಳು, ರಂಗಕೃತಿಗಳು, ರಂಗಸಂಗೀತವನ್ನು ಸೃಷ್ಟಿಸಿದ ಪದ್ಮಶ್ರೀ ಬಿ.ವಿ. ಕಾರಂತರು ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ ರಾಗಿದ್ದವರು. ಮಧ್ಯಪ್ರದೇಶದ ರಂಗಮಂಡಲ ಮತ್ತು ಮೈಸೂರಿನ ರಂಗಾಯಣಗಳ ಮೂಲಕ ದೇಶದ ರಂಗಭೂಮಿಗೆ ಹೊಸ ಚಿಂತನೆಗಳನ್ನು ಮತ್ತು ಆಯಾಮಗಳನ್ನು ನೀಡಿದವರು ಬಿ.ವಿ. ಕಾರಂತರು. ಕಾರಂತರ ಬದುಕು-ಸಾಧನೆಯನ್ನು ಸಂಕ್ಷಿಪ್ತವಾಗಿ ಪರಿಚಯಿಸಲಾಗಿದೆ.

About the Author

ಜಯಪ್ರಕಾಶ ಮಾವಿನಕುಳಿ
(05 May 1951)

ಸಾಹಿತಿ ಜಯಪ್ರಕಾಶ ಮಾವಿನಕುಳಿ ಅವರು ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯಿಕ ಕೃಷಿಯ ಜೊತೆಗೆ ನಾಟಕಕಾರರಾಗಿ, ರಂಗ ನಿರ್ದೇಶಕರಾಗಿ ಮತ್ತು ರಂಗಭೂಮಿ ಚಲನಚಿತ್ರ ನಟರಾಗಿಯೂ ಖ್ಯಾತಿ ಗಳಿಸಿದ್ದಾರೆ. ಕನ್ನಡ ಸಾಹಿತ್ಯಲೋಕಕ್ಕೆ ಹಲವು ನಾಟಕಗಳು, ಕಾದಂಬರಿ, ಸಣ್ಣಕತೆಗಳು, ಕಾವ್ಯ ಮತ್ತು ಇತರರೊಡನೆ ಹಲವು ಕೃತಿಗಳ ಸಂಪಾದನೆ ಸೇರಿದಂತೆ ಸುಮಾರು ಎಪ್ಪತ್ತು ಪುಸ್ತಕಗಳನ್ನು ನೀಡಿದ್ದಾರೆ. 1978ರಿಂದಲೂ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದು 4 ಕಥಾ ಸಂಕಲನಗಳು, 4 ಕವನ ಸಂಕಲನಗಳು, 7 ನಾಟಕಗಳು, 12 ಸಂಪಾದಿತ ಕೃತಿಗಳು ಹಾಗೂ ಇತರ ಕೃತಿಗಳೊಂದಿಗೆ 60ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. 'ಪೊಲಿಟಿಕ್ಸ್ ಆ್ಯಂಡ್ ಕಲ್ಚರ್' ಪ್ರೌಢ ಪ್ರಬಂಧಕ್ಕೆ ಡಾಕ್ಟರೇಟ್ ಪಡೆದಿದ್ದಾರೆ. ...

READ MORE

Related Books