ಬಿ. ವೆಂಕಟಾಚಾರ್ಯ

Author : ಲಕ್ಷ್ಮಣ ಕೊಡಸೆ

Pages 96

₹ 50.00




Year of Publication: 2016
Published by: ಸಾಹಿತ್ಯ ಅಕಾಡೆಮಿ
Address: ರವೀಂದ್ರ ಭವನ, ಫಿರೋಜ್‌ಷಾ ರಸ್ತೆ, ನವದೆಹಲಿ

Synopsys

ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಮೈಸೂರು ಸರ್ಕಾರದ ನ್ಯಾಯಾಂಗ ಇಲಾಖೆಯಲ್ಲಿದ್ದ ವೆಂಕಟಾಚಾರ್ಯರು ಬಂಗಾಳಿಯನ್ನು ಕಲಿತು ಈಶ್ವರಚಂದ್ರ ವಿದ್ಯಾಸಾಗರ್, ಬಂಕಿಮಚಂದ್ರ ಮೊದಲಾದ ಬಂಗಾಳಿ ಲೇಖಕರ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಕಾದಂಬರಿ ಪ್ರಕಾರವನ್ನು ಕನ್ನಡ ಓದುಗರಿಗೆ ಪರಿಚಯಿಸಿದವರು. ಕನ್ನಡಿಗರಲ್ಲಿ ಓದುವ ಅಭಿರುಚಿಯನ್ನೂ ಬೆಳೆಸಿದವರು. ಆಧುನಿಕ ಕನ್ನಡ ಸಾಹಿತ್ಯಕ್ಕೆ ಹೊಸ ಚೈತನ್ಯವನ್ನು ನೀಡಿದ ಆದ್ಯರಲ್ಲಿ ಬಿ.ವೆಂಕಟಾಚಾರ್ಯ ಪ್ರಮುಖರು. ಇವರು ನಡೆದುಬಂದ ಹಾದಿ, ಸಾಧನೆಗಳ ಸಂಪೂರ್ಣ ಪರಿಚಯ ಈ ಕೃತಿಯಲ್ಲಿದೆ.

About the Author

ಲಕ್ಷ್ಮಣ ಕೊಡಸೆ
(12 April 1953)

ಕತೆಗಾರ, ಪತ್ರಕರ್ತ ಲಕ್ಷ್ಮಣ ಕೊಡಸೆ ಅವರು 1953 ಏಪ್ರಿಲ್ 12ರಂದು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೊಡಸೆ ಗ್ರಾಮದಲ್ಲಿ ಜನಿಸಿದರು. ತಾಯಿ ಭರ್ಮಮ್ಮ, ತಂದೆ ಕರಿಯನಾಯ್ಕ. ಹುಟ್ಟೂರು ಹಾಗೂ ಹೊಸನಗರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪ್ರಜಾವಾಣಿಯಲ್ಲಿ ಉಪಸಂಪಾದಕರಾಗಿ, ಮುಖ್ಯವರದಿಗಾರರಾಗಿ ಸುದ್ದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ.  ‘ಅಪ್ಪನ ಪರಪಂಚ, ಕೊಡಚಾದ್ರಿ, ಸಹಪಥಿಕ, ಅವ್ವ, ಬಿ. ವೆಂಕಟಾಚಾರ್ಯ, ಕುವೆಂಪು ಮತ್ತು, ಕನ್ನಡ ವಿಮರ್ಶಾ ವಿವೇಕ, ಹಾಯಿದೋಣಿ’ ಅವರ ಪ್ರಮುಖ ಕೃತಿಗಳು.    ...

READ MORE

Related Books