ಬಾ ಇಂದಾದರೂ ಮಾತಾಡೋಣ

Author : ರೇಣುಕಾ ನಿಡಗುಂದಿ

Pages 112

₹ 100.00




Year of Publication: 2019
Published by: ಪಲ್ಲವ ಪ್ರಕಾಶನ
Address: ಚನ್ನಪಟ್ಟಣ ಪೋಸ್ಟ್, ವಯಾ- ಎಮ್ಮಿಗನೂರು, ಬಳ್ಳಾರಿ-583113
Phone: 9840354507

Synopsys

ಪಂಜಾಬಿ ಮತ್ತು ಹಿಂದಿ ಭಾಷೆಯ ಲೇಖಕಿ ಅಮೃತಾ ಪ್ರೀತಂ ಅವರ ಕವಿತೆಗಳನ್ನು ಕನ್ನಡಕ್ಕೆ ರೇಣುಕಾ ನಿಡಗುಂದಿ ಅವರು ತಂದಿದ್ದಾರೆ. 

’ಬಾ ಇಂದಾದರೂ ಮಾತಾಡೋಣ’ ಕವನ ಸಂಕಲನವು ಸಮಕಾಲೀನ ತಲ್ಲಣಗಳಿಗೆ ಮುಖಾಮುಖಿಯಾಗುತ್ತದೆ.  ಮಾನವೀಯ ಮೌಲ್ಯಗಳ ಇತಿಹಾಸವನ್ನು ಪುನರ್ ಸ್ಥಾಪಿಸುವ ಪ್ರಯತ್ನವೂ ಇಲ್ಲಿ ನಡೆದಿದೆ. ಮಾನವ ಧರ್ಮ ಮತ್ತು ಜೀವನ ಧರ್ಮಗಳೆರಡೂ ಅಮೃತಾ ಪ್ರೀತಂ ಅವರ ಕಾವ್ಯದುದ್ದಕ್ಕೂ ಕಾಣುವಂತದ್ದು. ಹೆಣ್ಣು ನೋಟದ ನೂರೆಂಟು ಭಾವಗಳನ್ನು ನೂರಾರು ಪ್ರತಿಮೆಗಳ ಮೂಲಕ ಪರಿಚಯಿಸುವ ಕಾವ್ಯ ಕುಸುರಿ ಅಮೃತಾ ಪ್ರೀತಂ ಅವರ ರಚನೆಯಲ್ಲಿದೆ. 

About the Author

ರೇಣುಕಾ ನಿಡಗುಂದಿ

ರೇಣುಕಾ ನಿಡಗುಂದಿಯವರು ಮೂಲತಹ ಧಾರವಾಡದವರು. ಮೂರು ದಶಕದಿಂದಲೂ ದೆಹಲಿಯಲ್ಲಿ ವಾಸ, ಖಾಸಗೀ ಕಂಪನಿಯೊಂದರಲ್ಲಿ ಉದ್ಯೋಗ, ದೆಹಲಿ ಕರ್ನಾಟಕ ಸಂಘದ 'ಮುಖವಾಣಿ 'ಅಭಿಮತ' ದ ಸಂಪಾದಕ ಬಳಗದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದಾರೆ, ಡಾ.ಪುರುಷೋತ್ತಮ ಬಿಳಿಮಲೆಯವರ ಸಂಪಾದಕತ್ವದಲ್ಲಿ " ರಾಜಧಾನಿಯಲ್ಲಿ ಕರ್ನಾಟಕ" ಪುಸ್ತಕವನ್ನು ಸಂಪಾದಿಸಿದ್ದು ಅನೇಕ, ಕಥೆ, ಕವನ, ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಮಾಸಿಕಗಳಲ್ಲಿ ಪ್ರಕಟಗೊಂಡಿವೆ. 'ಓ ಮನಸೇ' ದೈಮಾಸಿಕ ಪತ್ರಿಕೆಯಲ್ಲಿ 'ರಾಜಧಾನಿ ಮೇಲ್' ಅಂಕಣ ಬರೆಹ ಬರೆಯುತ್ತಿದ್ದರು. ಬಿಡುಗಡೆಯಾದ ಕೃತಿಗಳು - ಮೊದಲ ಕವನ ಸಂಕಲನ " ಕಣ್ಣ ಕಣಿವೆ" 2008 ( ಪ್ರಗತಿ ಗ್ರಾಫಿಕ್ಸ್), “ದಿಲ್ಲಿ ಡೈರಿಯ ...

READ MORE

Related Books